
ನವದೆಹಲಿ(ಏ.04): ಲಾಕ್ಡೌನ್ ಮುಕ್ತಾಯಗೊಂಡ ಮೇಲೆ ಸಾರ್ವಜನಿಕರು ಏಕಾಏಕಿ ರಸ್ತೆಗಿಳಿಯುವುದನ್ನು ತಡೆಯಬೇಕು ಎಂದು ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ್ದಾರೆ. ಶುಕ್ರವಾರ ಮೋದಿ, ಭಾರತದ ಅಗ್ರ ಕ್ರೀಡಾಪಟುಗಳ ಜತೆ ವಿಡಿಯೋ ಸಂವಾದ ನಡೆಸಿದರು.
ಸಚಿನ್, ಕೊಹ್ಲಿ ಸೇರಿ 40 ಕ್ರೀಡಾಪಟುಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ!
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡುಲ್ಕರ್, ವಿಶ್ವ ಚಾಂಪಿಯನ್ ಶಟ್ಲರ್ ಪಿ.ವಿ.ಸಿಂಧು, ದಿಗ್ಗಜ ಅಥ್ಲೀಟ್ ಪಿ.ಟಿ.ಉಷಾ, ಚೆಸ್ ತಾರೆ ವಿಶ್ವನಾಥನ್ ಆನಂದ್, ಯುವ ಶೂಟರ್ ಮನು ಭಾಕರ್, ಅಥ್ಲೀಟ್ಗಳಾದ ಹಿಮಾ ದಾಸ್, ನೀರಜ್ ಚೋಪ್ರಾ ಸೇರಿದಂತೆ 40ಕ್ಕೂ ಹೆಚ್ಚು ಕ್ರೀಡಾ ತಾರೆಯರು ಪಾಲ್ಗೊಂಡಿದ್ದರು. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸಹ ಸಂವಾದದಲ್ಲಿ ಭಾಗಿಯಾಗಿದ್ದರು.
ಭಾರತದಲ್ಲೇ ಮಹಿಳಾ ವಿಶ್ವಕಪ್ ವೀಕ್ಷಿಸಿದರ ಸಂಖ್ಯೆ ಬರೋಬ್ಬರಿ 90 ಲಕ್ಷ..!
ಬೆಳಗ್ಗೆ 11 ಗಂಟೆಗೆ ಆರಂಭಗೊಂಡ ಸಂವಾದ 1 ಗಂಟೆಗೂ ಹೆಚ್ಚು ಕಾಲ ನಡೆಯಿತು. ಕೊರೋನಾ ಸೋಂಕು ತಡೆಯಲು ಸರ್ಕಾರ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಕ್ರೀಡಾಪಟುಗಳು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ‘ನಿಮ್ಮ ಸಲಹೆಗಳನ್ನು ಪರಿಗಣಿಸುತ್ತೇನೆ. ಸೋಂಕಿನ ವಿರುದ್ಧ ಟೀಂ ಇಂಡಿಯಾ ರೀತಿಯಲ್ಲಿ ನಾವು ಹೋರಾಡುತ್ತಿದ್ದೇವೆ. ನಿಮ್ಮೆಲ್ಲರ ಬೆಂಬಲ ಭಾರತ ಗೆಲ್ಲಲು ಸಹಕಾರಿಯಾಗಲಿದೆ’ ಎಂದರು.
‘ನಮಸ್ತೆ’ ಪಾಲಿಸುವೆ: ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕವೂ ನಾನು ನಿಮ್ಮಂತೆಯೇ ಇತತರೊಂದಿಗೆ ಕೈಕುಲುಕುವ ಬದಲಿಗೆ ‘ನಮಸ್ತೆ’ ಎಂದೇ ಪರಸ್ಪರ ಕುಶಲೋಪರಿ ನಡೆಸಲು ಪ್ರುಯತ್ನಿಸುತ್ತೇನೆ ಎಂದು ಸಚಿನ್ ತೆಂಡುಲ್ಕರ್, ಮೋದಿಗೆ ತಿಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.