ದಾಂಪತ್ಯ ಜೀವನಕ್ಕೆ ಕ್ರಿಕೆಟಿಗ ಕೃಷ್ಣಪ್ಪ ಗೌತಮ್‌

Published : Dec 07, 2019, 09:57 AM IST
ದಾಂಪತ್ಯ ಜೀವನಕ್ಕೆ ಕ್ರಿಕೆಟಿಗ ಕೃಷ್ಣಪ್ಪ ಗೌತಮ್‌

ಸಾರಾಂಶ

ಕರ್ನಾಟಕದ ಆಲ್ರೌಂಡರ್ ಕೃಷ್ಣಪ್ಪ ಗೌತಮ್‌ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮನೀಶ್ ಪಾಂಡೆ ಬಳಿಕ ಮತ್ತೊಬ್ಬ ರಾಜ್ಯದ ಕ್ರಿಕೆಟಿಗ ಹಸೆಮಣೆ ಏರಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು(ಡಿ.07): ಕರ್ನಾಟಕ ತಂಡದ ಆಲ್ರೌಂಡರ್‌ ಕೃಷ್ಣಪ್ಪ ಗೌತಮ್‌ ಶುಕ್ರ​ವಾರ ತಮ್ಮ ಬಹುದಿನ​ಗಳ ಗೆಳ​ತಿ ಅರ್ಚನಾ ಸುಂದತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ವಿವಾಹ ಸಮಾ​ರಂಭ​ದಲ್ಲಿ ಕುಟುಂಬ​ಸ್ಥರು ಹಾಗೂ ಆಪ್ತ ಸ್ನೇಹಿ​ತರು ಪಾಲ್ಗೊಂಡಿ​ದ್ದರು. 

ಇತ್ತೀಚೆಗೆ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌)ನ ಶಿವಮೊಗ್ಗ ಲಯನ್ಸ್‌ ವಿರುದ್ಧದ ಪಂದ್ಯ​ದಲ್ಲಿ ಬಳ್ಳಾರಿ ಟಸ್ಕರ್ಸ್‌ನ ಗೌತಮ್‌ ಅಜೇಯ 134 ರನ್‌ ಹಾಗೂ 15 ರನ್‌ಗಳಿಗೆ 8 ವಿಕೆಟ್‌ ಕಿತ್ತು ಟಿ20 ಇತಿಹಾಸದಲ್ಲೇ ವಿಶೇಷ ದಾಖಲೆ ಬರೆದಿದ್ದರು. ಪಂದ್ಯದ ಬಳಿಕ ಗೌತಮ್‌, ‘ನನ್ನ ಗೆಳತಿಯ ನಗುವೇ ನನಗೆ ಸ್ಫೂರ್ತಿ’ ಎಂದಿ​ದ್ದ​ರು. 

ಹೊಸ ಬದುಕಿಗೆ ಕಾಲಿಟ್ಟ ಮನೀಶ್ ಪಾಂಡೆಗೆ ಶುಭಕೋರಿದ ವಿರಾಟ್ ಕೊಹ್ಲಿ!

ಇನ್ನು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಅಂತಿಮ ಓವರ್ ಬೌಲಿಂಗ್ ಮಾಡುವ ಮೂಲಕ ತಂಡಕ್ಕೆ 1 ರನ್’ಗಳ ರೋಚಕ ಗೆಲುವು ತಂದಿತ್ತಿದ್ದರು. ಡಿ.9ರಿಂದ ಆರಂಭ​ಗೊ​ಳ್ಳ​ಲಿ​ರುವ ರಣಜಿ ಟ್ರೋಫಿ​ಯಲ್ಲಿ ಗೌತಮ್‌ ರಾಜ್ಯ ತಂಡದ ಪರ ಕಣ​ಕ್ಕಿ​ಳಿ​ಯ​ಲಿ​ದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿವೀಸ್ ಸರಣಿ: ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಮತ್ತಷ್ಟು ತಡ; ಈ ಆಟಗಾರನಿಗೆ ಚಾನ್ಸ್?
2025ರಲ್ಲಿ ಅತೀ ಹೆಚ್ಚು ಗೂಗಲ್‌ ಹುಡುಕಾಟದಲ್ಲಿ ಇವರೇ ಟಾಪ್! ಕ್ರಿಕೆಟ್ ಲೋಕದ ಅಚ್ಚರಿಯ ಮುಖಗಳಿವು