ಅಭ್ಯಾಸ ಆರಂಭಿಸಿದ ಶ್ರೀಶಾಂತ್, IPL ಟೂರ್ನಿಗೆ ವಾಪಾಸ್ಸಾಗಲು ಪ್ಲಾನ್!

Published : Oct 24, 2019, 03:48 PM IST
ಅಭ್ಯಾಸ ಆರಂಭಿಸಿದ ಶ್ರೀಶಾಂತ್, IPL ಟೂರ್ನಿಗೆ ವಾಪಾಸ್ಸಾಗಲು ಪ್ಲಾನ್!

ಸಾರಾಂಶ

ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಈಗಾಗಲೇ ಅಭ್ಯಾಸ ಆರಂಭಿಸಿರುವ ಶ್ರೀಶಾಂತ್ , ಕೇರಳ ರಣಜಿ ನಾಯಕನನ್ನು ಕ್ಲೀನ್ ಬೋಲ್ಡ್ ಮಾಡಿದ್ದಾರೆ. ಶ್ರೀಶಾಂತ್ ಕಮ್‌ಬ್ಯಾಕ್ ಪ್ಲಾನ್ ಹಾಗೂ ನಿಷೇಧ ಕುರಿತ ಹೆಚ್ಚಿನ ವಿವರ ಇಲ್ಲಿದೆ.  

ಕೊಚ್ಚಿ(ಅ.24): ಟೀಂ ಇಂಡಿಯಾದ ವಿವಾದಿತ ವೇಗಿ ಎಸ್ ಶ್ರೀಶಾಂತ್ ನಿಷೇದದ ಶಿಕ್ಷೆ ಮುಗಿಯುತ್ತಿರುವ ಬೆನ್ನಲ್ಲೇ ಅಭ್ಯಾಸ ಆರಂಭಿಸಿದ್ದಾರೆ. ಐಪಿಎಲ್ ಟೂರ್ನಿ ಹಾಗೂ ವಿದೇಶಿ ಲೀಗ್ ಟೂರ್ನಿ ಮೇಲೆ ಕಣ್ಣಿಟ್ಟಿರುವ ಶ್ರೀಶಾಂತ್ ಒಳಾಂಗಣ ಕ್ರೀಡಾಂಗಣದಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ.

 

ಇದನ್ನೂ ಓದಿ: ಶ್ರೀಶಾಂತ್ ಆರೋಪಕ್ಕೆ ದಿನೇಶ್ ಕಾರ್ತಿಕ್ ತಿರುಗೇಟು!

2013ರ ಸ್ಪಾಟ್ ಫಿಕ್ಸಿಂಗ್ ಆರೋಪದಿಂದ ಶ್ರೀಶಾಂತ್ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿತ್ತು. ಕಾನೂನು ಹೋರಾಟದಲ್ಲಿ ಶ್ರೀಶಾಂತ್‌ಗೆ ಗೆಲುವು ಸಿಕ್ಕಿದರೂ, ಬಿಸಿಸಿಐ ನಿಷೇದ ತೆರವುಗೊಳಸಲಿಲ್ಲ. ಇತ್ತೀಚೆಗಷ್ಟೇ ಶ್ರೀಶಾಂತ್ ಮೇಲಿನ ಅಜೀವ ನಿಷೇಧವನ್ನು 7 ವರ್ಷಕ್ಕೆ ಕಡಿತಗೊಳಿಸಲಾಯಿತು. ಈಗಾಗಲೇ 6 ವರ್ಷ ಶಿಕ್ಷೆ ಪೂರೈಸಿರುವ ಶ್ರೀ, 2020ರಲ್ಲಿ ನಿಷೇಧದಿಂದ ಮುಕ್ತವಾಗಲಿದ್ದಾರೆ.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ 100 ನನ್ನ ವಿಕೆಟ್ ಗುರಿ; ಮತ್ತೆ ಕಣಕ್ಕಳಿಯಲು ರೆಡಿಯಾದ ಶ್ರೀ!

ನಿಷೇಧ ಮುಗಿಯಲು ಒಂದು ವರ್ಷ ಬಾಕಿ ಇರುವಾಗಲೇ ಶ್ರೀಶಾಂತ್ ಕಸರತ್ತು ಆರಂಭಿಸಿದ್ದಾರೆ. ಕೇರಳ ರಣಜಿ ನಾಯಕನಿಗೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇಷ್ಟೇ ಅಲ್ಲ ಕ್ಲೀನ್ ಬೋಲ್ಡ್ ಮಾಡಿದ್ದಾರೆ. ಶ್ರೀಶಾಂತ್ ಟೀಂ ಇಂಡಿಯಾ ಕಮ್‌ಬ್ಯಾಕ್ ಬಹುತೇಕ ಮುಚ್ಚಿಹೋಗಿದೆ. ಹೀಗಾಗಿ ಶ್ರೀಶಾಂತ್ ಐಪಿಎಲ್ ಹಾಗೂ ವಿದೇಶಿ ಲೀಗ್ ಟೂರ್ನಿ ಆಡಲು ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀಶಾಂತ್‍‌ಗೆ ಬಿಗ್ ರಿಲೀಫ್; ನಿಷೇಧ ಕಡಿತಗೊಳಿಸಿದ BCCI!

ಐಪಿಎಲ್ ಟೂರ್ನಿಯಲ್ಲೇ ಶ್ರೀಶಾಂತ್ ಮೇಲೆ ಫಿಕ್ಸಿಂಗ್ ಆರೋಪ ಕೇಳಿ ಬಂದ ಕಾರಣ, ಯಾವ ಫ್ರಾಂಚೈಸಿ ಕೂಡ ಖರೀದಿಗೆ ಮುಂದೆ ಬರುವ ಸಾಧ್ಯತೆ ಕಡಿಮೆ. ಇದೊಂದೆ ಕಾರಣವಲ್ಲ, ಈಗಾಗಲೇ ಶ್ರೀಶಾಂತ್ ವಯಸ್ಸು 36. ಹೀಗಾಗಿ ಈ ವಯಸ್ಸಿನಲ್ಲಿ ವೇಗಿಗಳು ಯಶಸ್ಸು ಸಾಧಿಸುವುದು ಕಷ್ಟ. ಆದರೆ ಶ್ರೀಶಾಂತ್ ಆತ್ಮವಿಶ್ವಾಸದಲ್ಲಿದ್ದಾರೆ. ಆರಂಭದಲ್ಲಿ ಕೇರಳ ಪರ ರಣಜಿ ಆಡಿ, ಬಳಿಕ ಲೀಗ್ ಟೂರ್ನಿಯತ್ತ ಗಮನಹರಿಸಲು ಚಿಂತಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!
ಈ ಒಂದು ತಂಡ ಬಿಟ್ಟು ಆರ್‌ಸಿಬಿ, ಚೆನ್ನೈ ಸೇರಿ ಐಪಿಎಲ್‌ ತಂಡಗಳ ಬ್ರ್ಯಾಂಡ್ ಮೌಲ್ಯ ಭಾರೀ ಕುಸಿತ!