ಗಾಯಗೊಂಡ ಹುಲಿಯನ್ನು ಕೆಣಕದಿರಿ; ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ನೆಟ್ಟಿಗರು

Suvarna News   | Asianet News
Published : Dec 29, 2020, 11:21 AM IST
ಗಾಯಗೊಂಡ ಹುಲಿಯನ್ನು ಕೆಣಕದಿರಿ; ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ನೆಟ್ಟಿಗರು

ಸಾರಾಂಶ

ಆಸ್ಟ್ರೇಲಿಯಾ ವಿರುದ್ದ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಪ್ರದರ್ಶನವನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮೆಲ್ಬರ್ನ್‌(ಡಿ.29): ಬಹುನಿರೀಕ್ಷಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಎದುರು ಅಜಿಂಕ್ಯ ರಹಾನೆ ನೇತೇತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಪಂದ್ಯದ ಸೋಲಿಗೆ ತಿರುಗೇಟು ನೀಡಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್‌ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಸಂಘಟಿತ ಪ್ರದರ್ಶನ ತೋರುವ ಮೂಲಕ ಮೆಲ್ಬರ್ನ್ ಟೆಸ್ಟ್‌ ಪಂದ್ಯದಲ್ಲಿ 8 ವಿಕೆಟ್‌ಗಳ ಸ್ಮರಣೀಯ ಗೆಲುವು ದಾಖಲಿಸಿದೆ. 

ವಿರಾಟ್ ಕೊಹ್ಲಿ, ಶಮಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡುವ ಪ್ರಶ್ನೆಯೇ ಇಲ್ಲ. ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ 4-0 ಅಂತರದ ಹೀನಾಯ ಸೋಲು ಕಾಣಲಿದೆ ಎಂದೆಲ್ಲ ವಿಶ್ಲೇಷಿಸಲಾಗಿತ್ತು. ಆದರೆ ಟೀಂ ಇಂಡಿಯಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಕಾಂಗರೂ ಪಡೆಗೆ ತಿರುಗೇಟು ನೀಡಿದೆ.

ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ದಿಗ್ವಿಜಯ

ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಭಾರತ ತಂಡದ ಪ್ರದರ್ಶನವನ್ನು ಕೊಂಡಾಡಿದ್ದು, ಗಾಯಗೊಂಡ ಹುಲಿಯನ್ನು ಸುಲಭವಾಗಿ ಪರಿಗಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ವಿರೇಂದ್ರ ಸೆಹ್ವಾಗ್, ವಾಸೀಂ ಜಾಫರ್‌, ಟಾಮ್‌ ಮೂಡಿ ಸೇರಿದಂತೆ ಹಲವು ಮಂದಿ ಟೀಂ ಇಂಡಿಯಾಗೆ ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!
ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ