ಟಿ20 ವಿಶ್ವಕಪ್‌ಗೆ ಜನ ಬರುವುದು ಅನುಮಾನ: ಆಸೀಸ್ ಕ್ರೀಡಾ ಸಚಿವ

Suvarna News   | Asianet News
Published : May 05, 2020, 05:24 PM IST
ಟಿ20 ವಿಶ್ವಕಪ್‌ಗೆ ಜನ ಬರುವುದು ಅನುಮಾನ: ಆಸೀಸ್ ಕ್ರೀಡಾ ಸಚಿವ

ಸಾರಾಂಶ

ಟಿ20 ವಿಶ್ವಕಪ್ ಟೂರ್ನಿ ಆಯೋಜಿಸುವುದಕ್ಕಿಂತ ಜನರನ್ನು ಮೈದಾನಕ್ಕೆ ಕರೆ ತರುವುದು ನಮ್ಮ ಮುಂದಿರುವ ಅತಿದೊಡ್ಡ ಸವಾಲು ಎಂದು ಆಸ್ಟ್ರೇಲಿಯಾದ ಕ್ರೀಡಾ ಸಚಿವರು ಹೇಳಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಮೆಲ್ಬರ್ನ್‌(ಮೇ.05): ಈ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಬಗ್ಗೆ ಆಸ್ಪ್ರೇಲಿಯಾ ಸರ್ಕಾರಕ್ಕೆ ಹೊಸ ಗೊಂದಲ ಶುರುವಾಗಿದೆ. 

ಟಿ20 ವಿಶ್ವಕಪ್‌ ಟೂರ್ನಿ ಆಯೋಜನೆ ಸವಾಲೇನಲ್ಲ, ತಂಡಗಳಿಗೆ ಸೂಕ್ತ ವ್ಯವಸ್ಥೆ, ಅಗತ್ಯವಿರುವ ಸೌಲಭ್ಯ ಎಲ್ಲವನ್ನೂ ತೊಂದರೆಯಿಲ್ಲದ ರೀತಿ ನಿಭಾಯಿಸಬಲ್ಲೆವು, ಆದರೆ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಗಳಿಗೆ ಪ್ರೇಕ್ಷಕರು ಬರುತ್ತಾರಾ ಎನ್ನುವ ಬಗ್ಗೆ ಅನುಮಾನವಿದೆ ಎಂದು ಆಸ್ಪ್ರೇಲಿಯಾದ ಕ್ರೀಡಾ ಸಚಿವ ರಿಚರ್ಡ್‌ ಕೊಲ್ಬೆಕ್‌ ಹೇಳಿದ್ದಾರೆ. ‘ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶಿ ಅಭಿಮಾನಿಗಳು ಬರುವುದು ಅನುಮಾನ. ಸ್ಥಳೀಯ ಪ್ರೇಕ್ಷಕರನ್ನು ಕ್ರೀಡಾಂಗಣಗಳಿಗೆ ಸೆಳೆಯುವುದು ಸಹ ಸವಾಲಾಗಿ ಪರಿಣಮಿಸಲಿದೆ’ ಎಂದು ರಿಚರ್ಡ್‌ ಹೇಳಿದ್ದಾರೆ.

ನಾನು ತವರಿನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ವೀಕ್ಷಿಸಲು ತುದಿಗಾಲಿನಲ್ಲಿ ನಿಂತಿದ್ದೇನೆ. ಇದರ ಜತೆಗೆ ಎಲ್ಲವೂ ಅಂದುಕೊಂಡಂತೆ ಆದರೆ ಟಿ20 ಟೂರ್ನಿಯನ್ನು ವೀಕ್ಷಿಸಲು ಉತ್ಸುಕನಾಗಿದ್ದೇನೆ. ಆದರೆ ಪ್ರೇಕ್ಷಕರಿಲ್ಲದೆ ಟೂರ್ನಿ ಯಶಸ್ವಿಯಾಗುತ್ತದೆಯೇ ಎನ್ನುವ ಅನುಮಾನವಿದೆ ಎಂದು ಅವರು ಹೇಳಿದ್ದಾರೆ. 

ಕೊಹ್ಲಿಗಿಂತ ರೋಹಿತ್ ಬೆಸ್ಟ್; ಕಾರಣ ಹೇಳಿದ ಗೌತಮ್ ಗಂಭೀರ್!

ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 18ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಟೀಂ ಇಂಡಿಯಾ ತ್ರಿಕೋನ ಸರಣಿಯನ್ನಾಡಲು ಆಸೀಸ್ ಪ್ರವಾಸವನ್ನು ಕೈಗೊಳ್ಳಲಿದೆ. ಇದರ ಜತೆಗೆ ಡಿಸೆಂಬರ್ ವೇಳೆಗೆ ಆತಿಥೇಯರ ವಿರುದ್ಧ ವಿರಾಟ್ ಪಡೆ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ಹಲವು ಟೂರ್ನಿಗಳು ಮುಂದೂಡಲ್ಪಟ್ಟಿವೆ. ಇನ್ನು ಟಿ20 ವಿಶ್ವಕಪ್ ಟೂರ್ನಿಯನ್ನು ಶತಾಯಗತಾಯ ಆಯೋಜಿಸಲು ಐಸಿಸಿ ಸಿದ್ದತೆ ನಡೆಸುತ್ತಿದೆ. ಇನ್ನು ಆಸ್ಟ್ರೇಲಿಯಾ ಕೊರೋನಾ ವಿರುದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತನ್ನ ಗಡಿಗಳನ್ನು ಸೀಲ್‌ ಮಾಡಿದೆ. ಇದರ ಜತೆಗೆ ವಿದೇಶಿ ಪ್ರವಾಸಿಗರಿಗೂ ನಿರ್ಬಂಧ ಹೇರಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?