ಟೀಂ ಇಂಡಿಯಾಗೆ ಕಹಿಯಾದ ಸಂಕ್ರಾತಿ ಹಬ್ಬ; ಕೊಹ್ಲಿ ಸೈನ್ಯಕ್ಕೆ ಹೀನಾಯ ಸೋಲು!

Suvarna News   | Asianet News
Published : Jan 14, 2020, 08:24 PM IST
ಟೀಂ ಇಂಡಿಯಾಗೆ ಕಹಿಯಾದ ಸಂಕ್ರಾತಿ ಹಬ್ಬ; ಕೊಹ್ಲಿ ಸೈನ್ಯಕ್ಕೆ ಹೀನಾಯ ಸೋಲು!

ಸಾರಾಂಶ

ಭಾರತ ವಿರುದ್ಧದ ಮದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ದಾಖಲೆಯ ಗೆಲುವು ಸಾಧಿಸಿದೆ. ವಿಕೆಟ್ ನಷ್ಟವಿಲ್ಲದೆ ಗೆಲುವು ಸಾಧಿಸಿದ ಆಸೀಸ್, ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಕೇಕೆ ಹಾಕಿದೆ.

ಮುಂಬೈ(ಜ.14): ಹೊಸ ವರ್ಷದ ಮೊದಲ ಟಿ20 ಸರಣಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನೊಂದಿಗೆ ಸಂಕ್ರಾತಿ ಹಬ್ಬ ಆಚರಿಸಲು ಮುಂದಾಗಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಡೇವಿಡ್ ವಾರ್ನರ್ ಹಾಗೂ ನಾಯಕ ಆ್ಯರೋನ್ ಫಿಂಚ್ ಅಬ್ಬರದಿಂದ ಭಾರತ ಹೀನಾಯ ಸೋಲು ಕಂಡಿತು.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ: ಕೊಹ್ಲಿ ಟೀಕಿಸಿದ ಫ್ಯಾನ್ಸ್!

ಆಸ್ಟ್ರೇಲಿಯಾಗೆ 256 ರನ್ ಟಾರ್ಗೆಟ್ ನೀಡಿದ ಟೀಂ ಇಂಡಿಯಾ ಬಹುಬೇಗನೆ ವಿಕೆಟ್ ಕಬಳಿಸಿ ಎದುರಾಳಿಗಳ ಮೇಲೆ ಒತ್ತಡ ಹೇರೋ ಪ್ಲಾನ್‌ನಲ್ಲಿತ್ತು. ಆದರೆ ಡೇವಿಡ್ ವಾರ್ನರ್ ಹಾಗೂ ಆ್ಯರೋನ್ ಫಿಂಚ್ ಸ್ಫೋಟಕ ಬ್ಯಾಟಿಂಗ್ ಎಲ್ಲಾ ಲೆಕ್ಕಾಚಾರ ತಲೆಕೆಳಗೆ ಮಾಡಿತು. ಬೌಂಡರಿ ಸಿಕ್ಸರ್ ಅಬ್ಬರಕ್ಕೆ ಟೀಂ ಇಂಡಿಯಾ ಬೌಲರ್‌ಗಳು ಸುಸ್ತಾದುರು.

ಇದನ್ನೂ ಓದಿ: INDvAUS ಮೊದಲ ಏಕದಿನ: ಕಪ್ಪು ಬಟ್ಟೆ ಧರಿಸಿದವರಿಗೆ ಪ್ರವೇಶ ನಿಷೇಧ!

ವಿಕೆಟ್ ಕಬಳಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದ್ದ ರಿವ್ಯೂ ಕೂಡ ಕಳೆದುಕೊಂಡರೂ ಆರಂಭಿಕರ ವಿಕೆಟ್ ಪತನವಾಗಲಿಲ್ಲ. ಇತ್ತ ವಾರ್ನರ್ ಹಾಗೂ ಫಿಂಚ್ ಭರ್ಜರಿ ಶತಕ ಸಿಡಿಸಿ ಮಿಂಚಿದರು.

ವಾರ್ನರ್ ಅಜೇಯ 128 ರನ್ ಹಾಗೂ ಫಿಂಚ್ ಅಜೇಯ 110 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ 37.4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಗೆಲುವಿನ ದಡ ಸೇರಿತು. ಭರ್ಜರಿ 10 ವಿಕೆಟ್ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.ಬರೋಬ್ಬರಿ 15 ವರ್ಷಗಳ ಬಳಿಕ ಭಾರತ 10 ವಿಕೆಟ್ ಹೀನಾಯ ಸೋಲು ಕಂಡಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು