ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿರುವ ಭಾರತ ತಂಡದ ಕ್ರಿಕೆಟ್ ಆಟಗಾರ್ತಿಯನ್ನು ಪ್ರವಾಹ ಭೀತಿಯಿಂದ ರಕ್ಷಿಸಿದ NDRF..!

Published : Aug 30, 2024, 12:51 PM IST
ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿರುವ ಭಾರತ ತಂಡದ ಕ್ರಿಕೆಟ್ ಆಟಗಾರ್ತಿಯನ್ನು ಪ್ರವಾಹ ಭೀತಿಯಿಂದ ರಕ್ಷಿಸಿದ NDRF..!

ಸಾರಾಂಶ

ಈ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಧಾ ಯಾದವ್, ‘ತುಂಬಾ ಸಂಕಷ್ಟ ಪರಿಸ್ಥಿತಿಯಲ್ಲಿದ್ದ ನಮ್ಮನ್ನು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.

ವಡೋದರಾ: ಗುಜರಾತ್‌ನ ವಡೋದರಾದಲ್ಲಿ ಪ್ರವಾಹದ ನಡುವೆ ಸಿಲುಕಿದ್ದ ಭಾರತ ಮಹಿಳಾ ತಂಡದ ತಾರಾ ಬೌಲರ್‌ ರಾಧಾ ಯಾದವ್‌ರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್‌) ಸಿಬ್ಬಂದಿ ರಕ್ಷಿಸಿದ್ದಾರೆ. 

ಈ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಧಾ ಯಾದವ್, ‘ತುಂಬಾ ಸಂಕಷ್ಟ ಪರಿಸ್ಥಿತಿಯಲ್ಲಿದ್ದ ನಮ್ಮನ್ನು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದಿದ್ದಾರೆ. ತಮ್ಮ ಮನೆಯ ಸುತ್ತಲೂ ಪ್ರವಾಹದ ನೀರು ನಿಂತಿರುವ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ತಮ್ಮನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುತ್ತಿರುವ ಫೋಟೋ, ವಿಡಿಯೋಗಳನ್ನು ರಾಧಾ ಹಂಚಿಕೊಂಡಿದ್ದಾರೆ. 

ಭಾರತಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲಿಸುವ ಗುರಿ ರಾಧಾ: ಬಹುನಿರೀಕ್ಷಿಯ 2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, 15 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡದಲ್ಲಿ ರಾಧಾ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ.  ಯುಎಇನಲ್ಲಿ ಮುಂಬರುವ ಅಕ್ಟೋಬರ್ 03ರಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ.  ಸ್ಪಿನ್ ಆಲ್ರೌಂಡರ್ ಆಗಿರುವ ರಾಧಾ ಯಾದವ್ ಭಾರತಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಕನಸಿನೊಂದಿಗೆ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ರಾಧಾ ಭಾರತ ಪರ 80 ಟಿ20, 4 ಏಕದಿನ ಪಂದ್ಯಗಳನ್ನಾಡಿದ್ದಾರೆ. 

ಯುಎಇನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು 'ಎ' ಗುಂಪಿನಲ್ಲಿ ಸ್ಥಾನ ಪಡೆದಿದೆ. ಹರ್ಮನ್ ಪಡೆ ಗ್ರೂಪ್ ಹಂತದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್. ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸುವ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಎದುರು ತಲಾ ಒಂದೊಂದು ಅಭ್ಯಾಸ ಪಂದ್ಯವನ್ನಾಡಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ