ದೆಹಲಿ ಮಾಲಿನ್ಯಕ್ಕೆ ಬಿಸಿಸಿಐ ಕಂಗಾಲು, ಮೊದಲ ಪಂದ್ಯ ರದ್ದಾಗೋ ಭೀತಿ!

Published : Nov 03, 2019, 03:32 PM ISTUpdated : Nov 03, 2019, 04:48 PM IST
ದೆಹಲಿ ಮಾಲಿನ್ಯಕ್ಕೆ ಬಿಸಿಸಿಐ ಕಂಗಾಲು, ಮೊದಲ ಪಂದ್ಯ ರದ್ದಾಗೋ ಭೀತಿ!

ಸಾರಾಂಶ

ದೆಹಲಿಯಲ್ಲಿ ಆಯೋಜಿಸಲಾಗಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದೇ ಅನುಮಾನವಾಗಿದೆ. ಮಾಲಿನ್ಯ ಮೀತಿ ಮೀರಿದ್ದು, ಪಂದ್ಯ ರದ್ದು ಮಾಡುವು ಕುರಿತು ಬಿಸಿಸಿಐ ಚಿಂತಿಸುತ್ತಿದೆ.


ನವದೆಹಲಿ(ನ.03): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸರಣಿ ಆಯೋಜನೆ ಬಿಸಿಸಿಐಗೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆರಂಭದಲ್ಲಿ ಬಾಂಗ್ಲಾ ಕ್ರಿಕೆಟಿಗರ ಪ್ರತಿಭಟನೆಯಿಂದ ಟೂರ್ನಿ ನಡೆಯುವುದು ಅನುಮಾನವಾಗಿತ್ತು. ಇದೀಗ ಮೊದಲ ಟಿ20 ಪಂದ್ಯಕ್ಕೆ ಕೆಲ ಗಂಟೆಗಳು ಮಾತ್ರವ ಬಾಕಿ. ಆದರೆ ಪಂದ್ಯ ನಡೆಯುವು ಕುರಿತು ಬಿಸಿಸಿಐಗೇ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ: ಭಾರತ-ಬಾಂಗ್ಲಾ ಟಿ20: ಕನ್ನಡಿಗರಿಗೆ ಸಿಗುತ್ತಾ ಚಾನ್ಸ್..?

ದೀಪಾವಳಿ ಹಬ್ಬದ ಬಳಿಕ ದೆಹಲಿ ಮಾಲಿನ್ಯ ಮೀತಿ ಮೀರಿದ್ದು, ಸಂಪೂರ್ಣ ದೆಹಲಿಯಲ್ಲಿ ದಟ್ಟ ಧೂಳು ಮಿಶ್ರಿತ ಹೊಗೆ ಆವರಿಸಿದೆ. ಪಂದ್ಯ ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಗಳು ಕೇಳಿಬಂದಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬದಲಾವಣೆ ಮಾಡಲು ಬಿಸಿಸಿಐ ನಿರಾಕರಿಸಿತ್ತು. ಇದೀಗ ಮೊದಲ ಪಂದ್ಯಕ್ಕೆ ಭಾರತ ಹಾಗೂ ಬಾಂಗ್ಲಾದೇಶ ತಂಡ ಸಜ್ಜಾಗಿದೆ. ಆದರೆ ದೆಹಲಿ ಮಾಲಿನ್ಯದಿಂದ ಪಂದ್ಯ ನಡೆಯುವ ಕುರಿತು ಸ್ಪಷ್ಟತೆ ಇಲ್ಲ. ಧೂಳು ಮಿಶ್ರಿತ ಹೊಗೆ ಕಡಿಮೆಯಾದಲ್ಲಿ ಪಂದ್ಯ ನಡೆಲಿದೆ. ಆದರೆ ಈಗಲೇ ಪಂದ್ಯ ರದ್ದು ಕುರಿತು ಹೇಳಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ.

 

ಇದನ್ನೂ ಓದಿ: ಭಾರತ vs ಬಾಂಗ್ಲಾದೇಶ ಟಿ20; ಸಂಭಾವ್ಯ ತಂಡ ಪ್ರಕಟ, ಯಾರಿಗಿದೆ ಚಾನ್ಸ್?

ಇಂದು(ನ.03) ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ವೇಳೆ ಹೊಗೆ ಪ್ರಮಾಣ ತಗ್ಗಿದ್ದಲ್ಲಿ ಪಂದ್ಯ ನಡೆಯಲಿದೆ. ಅಕ್ಟೋಬರ್ 30ಕ್ಕೆ ದೆಹಲಿಗೆ ಆಗಮಿಸಿದ ಬಾಂಗ್ಲಾದೇಶ, ಮಾಸ್ಕ್ ಧರಿಸಿ ಅಭ್ಯಾಸ ಮಾಡಿತ್ತು. ಇತ್ತ ಟೀಂ ಇಂಡಿಯಾ ಮಾಲಿನ್ಯ ಕಾರಣದಿಂದ ಮೈದಾನದಲ್ಲಿ ಅಭ್ಯಾಸ ಮಾಡಿಲ್ಲ. ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಿದೆ.

ನವೆಂಬರ್ 7 ರಂದು ರಾಜ್‌ಕೋಟ್ ಹಾಗೂ ನವೆಂಬರ್ 10 ರಂದು ನಾಗ್ಪುರದಲ್ಲಿ 2ನೇ ಹಾಗೂ 3ನೇ ಟಿ20 ಪಂದ್ಯ ನಡೆಯಲಿದೆ.

ನವೆಂಬರ್ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವಿವಾದ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಘ ಸ್ಪಷ್ಟನೆ
ಕೊಹ್ಲಿ ಜೊತೆ ಕ್ರಿಕೆಟ್ ಆಡಿ ವಿಶ್ವಕಪ್ ಟ್ರೋಫಿ ಗೆದ್ದ ಕ್ರಿಕೆಟರ್ ಐಪಿಎಲ್‌ನಲ್ಲಿ ಈಗ ಅಂಪೈರ್