
ದೆಹಲಿ(ಡಿ.11): ಫ್ಲಾಟ್ ಖರೀದಿದಾರಿಗೆ ಮೋಸ, ನಂಬಿಕೆ ದ್ರೋಹ ಆರೋಪ ಎದುರಿಸುತ್ತಿದ್ದ ಮಾಜಿ ಕ್ರಿಕೆಟಿಗ, ದೆಹಲಿ ಸಂಸದ ಗೌತಮ್ ಗಂಭೀರ್ಗೆ ದೆಹಲಿ ಕೋರ್ಟ್ ಕ್ಲಿನ್ ಚಿಟ್ ನೀಡಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದರ್ ಸಿಂಗ್ ಈ ಮಹತ್ವದ ತೀರ್ಪು ನೀಡಿದ್ದಾರೆ.
ಹಾಟ್ ಸೀಟಲ್ಲಿ ಕ್ಯಾಪ್ಟನ್ ಕೊಹ್ಲಿ; ವಿರಾಟ್ ನಾಯಕತ್ವದ ಬಗ್ಗೆ ಅಸಮಾಧಾನ
2011ರಲ್ಲಿ ಘಾಜಿಯಾಬಾದ್ ಇಂದಿರಾಪುರದಲ್ಲಿ ರುದ್ರಾ ಬಿಲ್ಡ್ವೆಲ್ ರಿಲಾಯಿಲಿಟಿ ಪ್ರೈವೇಟ್ ಲಿಮಿಟೆಡ್ ಹಾಗೂ ಹೆಚ್ಆರ್ ಇನ್ಫ್ರಾಸಿಟಿ ಪ್ರೈವೇಟ್ ಲಿಮಿಟೆಡ್ ನಿರ್ಮಾಣದ ಫ್ಲಾಟ್ಗೆ ಹಣ ಹೂಡಿಕೆ ಮಾಡಿದವರಿಗೆ ಫ್ಲಾಟ್ ಸಿಕ್ಕಿಲ್ಲ. ಹೀಗಾಗಿ ಸುಮಾರು 50ಕ್ಕೂ ಹೆಚ್ಚುು ಫ್ಲಾಟ್ ಖರೀದಿದಾರರು ದೂರು ದಾಖಲಿಸಿದ್ದರು.
ಟಿ-20ಗೆ ರೋಹಿತ್ ನಾಯಕರಾಗದೆ ಇದ್ದರೆ ಭಾರತಕ್ಕೆ ನಷ್ಟ'.
ರುದ್ರಾ ಬಿಲ್ಡ್ವೆಲ್ ಹಾಗೂ ಇನ್ಫ್ರಾಸಿಟಿ ಯೋಜನೆಗೆ ಕ್ರಿಕೆಟಿಗ ಗೌತಮ್ ಗಂಭೀರ್ ನಿರ್ದೇಶಕ ಹಾಗೂ ರಾಯಭಾರಿ ಆಗಿದ್ದರು. ಹೀಗಾಗಿ ಗಂಭೀರ್ ಸೇರಿದಂತೆ ಹಲವರ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಫ್ಲಾಟ್ ಹಸ್ತಾಂತರಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಅವದಿ ಮುಗಿದರೂ ಫ್ಲಾಟ್ ಸಿಗದ ಕಾರಣ ದೂರು ನೀಡಿದ್ದರು.
2014ರ ವರೆಗೆ ಅವಧಿ ಪಡೆದ ಬಿಲ್ಡರ್ ಮಾತು ತಪ್ಪಿದ್ದರು. ಹೀಗಾಗಿ ಪ್ರಕರಣ ಗಂಭೀರ ಸ್ವರೂಪ ಪಡೆದಕೊಂಡಿತ್ತು. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಫ್ಲಾಟ್ ವಂಚನೆ ಪ್ರಕರಣದ ಕುರಿತು ಪೊಲೀಸರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದಲ್ಲಿ ಸ್ಥಳೀಯ ಶಾಸಕರು ಈ ಪ್ರಕರಣದಲ್ಲಿ ಶಾಮೀಲಾಗಿರುವ ಕುರಿತು ಪೊಲೀಸರು ಬೆಳಕು ಚೆಲ್ಲಿದ್ದರು.
ಫ್ಲಾಟ್ ವಂಚನೆ ಪ್ರಕರಣದಲ್ಲಿ ಗೌತಮ್ ಗಂಭೀರ್ ಪಾತ್ರವಿಲ್ಲ ಎಂದು ದೆಹಲಿ ಮ್ಯಾಜಿಸ್ಟ್ರೇಟ್ ಹೇಳಿದೆ. ಇನ್ನು ಈ ಪ್ರಕರಣ ವ್ಯಾಪ್ತಿಹೊಂದಿರುವ ನ್ಯಾಯಾಲಯಕ್ಕೆ ವಂಚನೆ ಪ್ರಕರಣವನ್ನು ವರ್ಗಾಯಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.