ಅಭಿಷೇಕ್ ಶರ್ಮಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.. ಹೈಕೋರ್ಟ್‌ನಿಂದ ಸಮನ್ಸ್ ಜಾರಿ

Published : Jul 09, 2026, 04:23 PM IST
abhishek sharma court case

ಸಾರಾಂಶ

ಕೆಲವು ಆನ್‌ಲೈನ್ ವೇದಿಕೆಗಳು ಟೀಂ ಇಂಡಿಯಾ ಸ್ಟಾರ್ ಅಭಿಷೇಕ್ ಶರ್ಮಾ ಅವರ ನಿದ್ದೆಗೆಡಿಸಿದ್ದವು. ಅವುಗಳ ವಿರುದ್ಧ ಕಾನೂನು ಸಮರ ಸಾರಿದ್ದ ಅಭಿಷೇಕ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಏನಿದು ಕೇಸ್ ಅನ್ನೋ ವಿವರ ಇಲ್ಲಿದೆ.. 

ನವದೆಹಲಿ: ಟೀಮ್ ಇಂಡಿಯಾದ ಯುವ ಆಟಗಾರ ಅಭಿಷೇಕ್ ಶರ್ಮಾ ಮೈದಾನದ ಹೊರಗೆ ಕಾನೂನು ಸಮರಕ್ಕಿಳಿದಿದ್ದಾರೆ. ತಮ್ಮ ಹೆಸರು, ಭಾವಚಿತ್ರ ಮತ್ತು ವ್ಯಕ್ತಿತ್ವವನ್ನು ಅನುಮತಿಯಿಲ್ಲದೆ ಆನ್‌ಲೈನ್‌ನಲ್ಲಿ ಬಳಸುತ್ತಿರುವವರ ವಿರುದ್ಧ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಿದೆ.

ಏನಿದು ಪ್ರಕರಣ?

ಅಭಿಷೇಕ್ ಶರ್ಮಾ ಅವರ ಹೆಸರು ಮತ್ತು ಭಾವಚಿತ್ರಗಳನ್ನು ವಿವಿಧ ಆನ್‌ಲೈನ್ ವೇದಿಕೆಗಳಲ್ಲಿ ಅನುಮತಿಯಿಲ್ಲದೆ ಬಳಸಲಾಗುತ್ತಿದೆ. ಅಷ್ಟೇ ಅಲ್ಲದೆ, ಕೃತಕ ಬುದ್ಧಿಮತ್ತೆ (AI) ಬಳಸಿ ಅವರ ಚಿತ್ರಗಳನ್ನು ತಿರುಚಲಾಗಿದೆ (Manipulated content) ಎಂಬುದು ಅವರ ದೂರು. ಇದನ್ನು ವ್ಯಕ್ತಿತ್ವದ ಹಕ್ಕುಗಳ (Personality Rights) ಉಲ್ಲಂಘನೆ ಎಂದು ಅವರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ನ್ಯಾಯಾಲಯದ ಕ್ರಮ

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಪ್ರತಿವಾದಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಥವಾ ಇತರ ಕಾನೂನುಬದ್ಧ ಮಾರ್ಗಗಳ ಮೂಲಕ ನೋಟಿಸ್ ನೀಡುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ನಿಗದಿಪಡಿಸಲಾಗಿದೆ.

ಇಂಟರ್ನೆಟ್ ಸ್ವಚ್ಛಗೊಳಿಸುವುದು ನಮ್ಮ ಕೆಲಸವಲ್ಲ ಎಂದ ಮೆಟಾ

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮಾತೃ ಸಂಸ್ಥೆ 'ಮೆಟಾ' (Meta) ಪರವಾಗಿ ಹಾಜರಾದ ವಕೀಲ ವರುಣ್ ಪಾಠಕ್, ಅಭಿಷೇಕ್ ಶರ್ಮಾ ಅವರ ಆಕ್ಷೇಪಾರ್ಹ ಪೋಸ್ಟ್‌ಗಳ ಪೈಕಿ ಹೆಚ್ಚಿನ ಲಿಂಕ್‌ಗಳನ್ನು ಈಗಾಗಲೇ ತೆಗೆದುಹಾಕಲಾಗಿದೆ. ಈಗ ಕೇವಲ ಎರಡು ಲಿಂಕ್‌ಗಳು ಮಾತ್ರ ಲಭ್ಯವಿವೆ ಎಂದು ತಿಳಿಸಿದರು. ಇದೇ ವೇಳೆ, ಇಂಟರ್ನೆಟ್‌ನಲ್ಲಿರುವ ಪ್ರತಿಯೊಂದು ಪೋಸ್ಟ್ ಅನ್ನು ಪರಿಶೀಲಿಸಿ ಕ್ಲೀನ್ ಅಪ್ ಮಾಡುವುದು ಮಧ್ಯವರ್ತಿ ಸಂಸ್ಥೆಗಳಿಗೆ ಅಸಾಧ್ಯ ಎಂದು ಮೆಟಾ ವಾದಿಸಿದೆ.

ವಿಚಾರಣೆ ವೇಳೆ ಜಸ್ಟಿಸ್ ಜ್ಯೋತಿ ಸಿಂಗ್ ಅವರು ಒಂದು ಮಹತ್ವದ ಅಂಶವನ್ನು ಪ್ರಸ್ತಾಪಿಸಿದರು. ವ್ಯಕ್ತಿತ್ವದ ಹಕ್ಕುಗಳ ಉಲ್ಲಂಘನೆ ಮತ್ತು ಮಾನಹಾನಿ (Defamation) ಪ್ರಕರಣಗಳ ನಡುವೆ ತುಂಬಾ ತೆಳುವಾದ ಗೆರೆಯಿದೆ. ಇವೆರಡೂ ಒಂದಕ್ಕೊಂದು ಸಂಬಂಧ ಹೊಂದಿವೆ ಎಂದು ಅಭಿಪ್ರಾಯಪಟ್ಟರು. ಸದ್ಯಕ್ಕೆ ಪ್ರತಿವಾದಿಗಳಿಗೆ ಸಮನ್ಸ್ ಜಾರಿಯಾಗಿದ್ದು, ಅವರು ನೀಡುವ ಉತ್ತರದ ಮೇಲೆ ನ್ಯಾಯಾಲಯವು ತಡೆಯಾಜ್ಞೆ (Injunction) ನೀಡುವ ಬಗ್ಗೆ ನಿರ್ಧರಿಸಲಿದೆ.

ಸದ್ಯ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರವಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಇಂಗ್ಲೆಂಡ್‌ನಲ್ಲಿದ್ದಾರೆ. ಮೈದಾನದಲ್ಲಿ ಬ್ಯಾಟ್ ಮೂಲಕ ಸದ್ದು ಮಾಡುತ್ತಿರುವ ಅವರು, ಮೈದಾನದ ಹೊರಗೆ ತಮ್ಮ ಹಕ್ಕುಗಳ ರಕ್ಷಣೆಗಾಗಿ ನಡೆಸುತ್ತಿರುವ ಈ ಹೋರಾಟ ಗಮನ ಸೆಳೆದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
Ind vs Eng 4th T20I: ಸಂಜು ಸ್ಯಾಮ್ಸನ್‌ ನಾಲ್ಕನೇ ಟಿ20 ಮ್ಯಾಚ್ ಆಡೋದು ಫಿಕ್ಸ್, ಹಾಗಿದ್ರೆ ಗೇಟ್‌ಪಾಸ್ ಯಾರಿಗೆ?