
ಜೋಹಾನ್ಸ್ಬರ್ಗ್(ಮಾ.19): ಕೊರೋನಾ ಸೋಂಕಿ ಭೀತಿಯಿಂದಾಗಿ ಭಾರತ ವಿರುದ್ಧದ ಏಕದಿನ ಸರಣಿ ರದ್ದಾದ ಕಾರಣ ತವರಿಗೆ ವಾಪಸಾದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಟಗಾರರಿಗೆ 14 ದಿನಗಳ ಕಾಲ ಸ್ವಯಂ ದಿಗ್ಬಂಧನದಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ.
ಇದನ್ನೂ ಓದಿ: ಕೈತೊಳೆಯಿರಿ’ ಅಭಿಯಾನಕ್ಕೆ ಸಚಿನ್, ಸಿಂಧು ಬೆಂಬಲ
ತಂಡದ ವೈದ್ಯಕೀಯ ಅಧಿಕಾರಿ ಡಾ.ಶೌಹಿಬ್ ಮಾಂಜ್ರ ಆಟಗಾರರಿಗೆ ಪ್ರತ್ಯೇಕವಾಗಿ ಇರಲು ಸೂಚಿಸಿದ್ದು, ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಪರೀಕ್ಷೆಗೆ ಒಳಪಡುವಂತೆ ತಿಳಿಸಿದ್ದಾರೆ. ಭಾರತದಲ್ಲಿ ಇದ್ದ ಸಮಯದಲ್ಲೂ ಆಟಗಾರರು ಪ್ರತ್ಯೇಕವಾಗಿದ್ದರು. ನಮ್ಮ ತಂಡ ಸುರಕ್ಷಿತವಾಗಿ ತವರಿಗೆ ವಾಪಸಾಗಲು ಬಿಸಿಸಿಐ ಎಲ್ಲಾ ರೀತಿಯಲ್ಲೂ ಸಹಕರಿಸಿತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೋನಾ ವಿರುದ್ಧ ತೊಡೆ ತಟ್ಟಿದ ಕ್ರಿಕೆಟರ್ಸ್..!
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನುಳಿದ 2 ಪಂದ್ಯ ಕೊರೋನಾ ವೈರಸ್ ಭೀತಿಯಿಂದ ರದ್ದಾಯಿತು. ವೈರಸ್ ಹರಡದಂತೆ ಮುನ್ನಚ್ಚೆರಿಕ ಕ್ರಮವಾಗಿ ಬಿಸಿಸಿಐ ಟೂರ್ನಿ ರದ್ದು ಮಾಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.