
ಲಂಡನ್(ಆ.14): ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ನಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡವು ಪಂದ್ಯವನ್ನು 4ನೇ ದಿನಕ್ಕೆ, ಅಂದರೆ ಆಗಸ್ಟ್ 15ಕ್ಕೆ ಗೆದ್ದು ಸ್ಮರಣೀಯಗೊಳಿಸುವ ಹುಮ್ಮಸ್ಸಿನಲ್ಲಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಆರಂಭಿಕ ಆಟಗಾರ ರೋಹಿತ್ ಶರ್ಮಾಗೆ ಪತ್ರಕರ್ತರೊಬ್ಬರು ಸ್ವಾತಂತ್ರ್ಯ ದಿನಾಚರಣೆಯಂದೇ ಪಂದ್ಯ ಗೆಲ್ಲುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ರೋಹಿತ್, ‘ಸಲ್ಯೂಟ್ ಮಾಡುತ್ತೇನೆ ಸರ್. ಇಂಗ್ಲೆಂಡ್ ವಿರುದ್ಧ ಆಗಸ್ಟ್ 15ರಂದು ಗೆಲುವು ಸಾಧಿಸಿದರೆ ಅದು ಅವಿಸ್ಮರಣೀಯ ಕ್ಷಣವಾಗಿ ಉಳಿಯಲಿದೆ’ ಎಂದು ಉತ್ತರಿಸಿದರು. ರೋಹಿತ್ ಮೊದಲ ಇನ್ನಿಂಗ್ಸ್ನಲ್ಲಿ 83 ರನ್ ಗಳಿಸಿ ಔಟಾಗಿದ್ದರು.
INDvsENG 2ನೇ ಟೆಸ್ಟ್; ಬೃಹತ್ ಮೊತ್ತ ಪೇರಿಸಿ 3 ವಿಕೆಟ್ ಕಬಳಿಸಿದ ಟೀಂ ಇಂಡಿಯಾ!
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 364 ರನ್ ಬಾರಿಸಿ ಆಲೌಟ್ ಆಯಿತು. ಇನ್ನು ಎರಡನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿದೆ. ಇನ್ನೂ ಇಂಗ್ಲೆಂಡ್ 245 ರನ್ಗಳ ಹಿನ್ನಡೆಯಲ್ಲಿದ್ದು, ನಾಯಕ ಜೋ ರೂಟ್ 48 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.