ಎಡ್ಜ್ಬಾಸ್ಟನ್ (ಜು.11) ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತ ಭಾರತ ಇದೀಗ ಏಕದಿನ ಮೂಲಕ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮರಳಿದ್ದಾರೆ. ವಿಶೇಷ ಅಂದರೆ 2023ರ ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಜಸ್ಪ್ರೀತ್ ಬುಮ್ರಾ ಏಕದಿನ ಮಾದರಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಭಾರತ ನಾಲ್ವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್ ಮೂಲಕ ಕಣಕ್ಕಿಳಿದಿದೆ.
ರೋಹಿತ್ ಶರ್ಮಾ, ಶುಬಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಶಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಸರ್ ಪಟೇಲ್, ಗುರ್ನೂರ್ ಬ್ರಾರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ
ಜೇಕಬ್ ಬೆಥಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್, ಸ್ಯಾಮ್ ಕುರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್
ಏಕದಿನ ಮಾದರಿಯಲ್ಲೂ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಗೆ ಬಲ ತುಂಬಿದ್ದರು.ಆದರೆ ಪಾಂಡ್ಯ ಅನುಪಸ್ಥಿತಿ ಟೀಂ ಇಂಡಿಯಾ ಮಧ್ಯಕ್ರಮಾಂಕ ಸಮಸ್ಯೆ ಹೆಚ್ಚಿಸಿದೆ. ಶಿವಂ ದುಬೆ ಪಾಂಡ್ಯ ಸ್ಥಾನ ತುಂಬಬಲ್ಲ ಭರವಸೆ ಮೂಡಿಸಿಲ್ಲ.ಇತ್ತ ಎಡ್ಜ್ಬಾಸ್ಟ್ನಲ್ಲಿ ನಡೆದ ಕಳೆದ 7 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಮೊದಲು 5 ಟಿ20 ಪಂದ್ಯಗಳ ಸರಣಿ ಆಡಿತ್ತು. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನುಳಿದ ನಾಲ್ಕು ಪಂದ್ಯದಲ್ಲಿ ಭಾರತ ಮುಗ್ಗರಿಸಿತ್ತು. 0-4 ಅಂತರದಿಂದ ಸರಣಿ ಸೋತು ಮುಖಭಂಗ ಅನುಭವಿಸಿತ್ತು. ಟೀಂ ಇಂಡಿಯಾ ಹೀನಾಯ ಪ್ರದರ್ಶನ ಭಾರಿ ಟೀಕೆಗೆ ಗುರಿಯಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.