ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಹುದ್ದೆಗೆ ಶಾರುಖ್ ಹೆಸರಲ್ಲಿ ಅರ್ಜಿ!

Published : May 28, 2024, 07:10 PM ISTUpdated : May 28, 2024, 07:21 PM IST
ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಹುದ್ದೆಗೆ ಶಾರುಖ್ ಹೆಸರಲ್ಲಿ ಅರ್ಜಿ!

ಸಾರಾಂಶ

ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ಐಪಿಎಲ್ ಟ್ರೋಫಿ ಗೆದ್ದಿದೆ. ಕೆಕೆಆರ್ ಕೋಚ್ ಗೌತಮ್ ಗಂಭೀರ್ ಟೀಂ ಇಂಡಿಯಾ ಕೋಚ್ ರೇಸ‌್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಇದೀಗ ಗಂಭೀರ್‌ಗೆ ಪೈಪೋಟಿ ನೀಡಲು ಶಾರುಖ್ ಖಾನ್ ಹೆಸರಲ್ಲಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಾಗಿದೆ

ಮುಂಬೈ(ಮೇ.28) ಐಪಿಎಲ್ ಟೂರ್ನಿ ಮುಗಿದೆ. ಕೋಲ್ಕತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೀಗ ಕೆಕೆಆರ್‌ಗೆ ಟ್ರೋಫಿ ಗೆಲ್ಲಿಸಿಕೊಟ್ಟ ಕೋಚ್ ಗೌತಮ್ ಗಂಭೀರ್‌ಗೆ ಭಾರಿ ಬೇಡಿಕೆ. ಟೀಂ ಇಂಡಿಯಾ ಕೋಚ್ ಹುದ್ದೆಯಲ್ಲೂ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ. ಇದೀಗ ಗಂಭೀರ್‌ಗೆ ಪೈಪೋಟಿ ನೀಡಲು ಕೆಕೆಆರ್ ಮಾಲೀಕ ಶಾರುಖ್ ಖಾನ್ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದು ನಕಲಿ ಅರ್ಜಿ. ಶಾರುಖ್ ಖಾನ್ ಹೆಸರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ.27 ಕೊನೆಯ ದಿನವಾಗಿತ್ತು. ಬರೋಬ್ಬರಿ 3,000 ಅರ್ಜಿಗಳು ಬಂದಿದೆ. ಈ ಪೈಕಿ ಶಾರುಖ್ ಖಾನ್ ಹೆಸರಲ್ಲೂ ಕೋಚ್ ಹುದ್ದೆಗೆ ಅರ್ಜಿ ಬಂದಿದೆ. ಬಿಸಿಸಿಐ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಹಲವು ಅಭಿಮಾನಿಗಳು ನಕಲಿ ಹೆಸರಿನಲ್ಲ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಶಾರುಖ್ ಖಾನ್ ಹೆಸರಲ್ಲೂ ಅರ್ಜಿ ಸಲ್ಲಿಕೆಯಾಗಿದೆ.

ಟೀಂ ಇಂಡಿಯಾ ಕೋಚ್ ಹುದ್ದೆಗೆ ನರೇಂದ್ರ ಮೋದಿ, ಅಮಿತ್ ಶಾ, ತೆಂಡೂಲ್ಕರ್ ಸೇರಿ 3,000 ಅರ್ಜಿ!

ಶಾರುಖ್ ಖಾನ್, ಬಾಲಿವುಡ್ ನಟ ಎಂದೇ ಅರ್ಜಿ ಸಲ್ಲಿಕೆಯಾಗಿದೆ. ಬಿಸಿಸಿಐಗೆ ಬಂದಿರುವ 3,000 ಅರ್ಜಿಗಳ ಪೈಕಿ ನಕಲಿ ಅರ್ಜಿಗಳ ಸಂಖ್ಯೆ ಹೆಚ್ಚಿದೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಸರಲ್ಲೂ ಅರ್ಜಿ ಸಲ್ಲಿಸಲಾಗಿದೆ. ಇನ್ನು ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಟೀಂ ಇಂಡಿಯಾ ಮಾಜಿ ಕ್ರಿಕೆಚಿಗರ ಹೆಸರಲ್ಲೂ ಅರ್ಜಿ ಸಲ್ಲಿಸಲಾಗಿದೆ.

ಕೆಲ ಅಭಿಮಾನಿಗಳು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ನನ್ನ ಗಲ್ಲಿ ಕ್ರಿಕೆಟ್ ಅನುಭವ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲು ನೆರವಾಗಲಿದೆ ಎಂದು ಬರೆದುಕೊಂಡಿದ್ದಾರೆ. ಬಿಸಿಸಿಐ ಇದೀಗ 3,000 ಅರ್ಜಿಗಳ ಪೈಕಿ ಅಸಲಿ ಅರ್ಜಿಯನ್ನು ಹುಡುಕಿ ತೆಗೆಯುತ್ತಿದೆ. ಈ ಪೈಕಿ ಅಸಲಿ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡಲಿದೆ. ಬಳಿಕ ಈ ಪಟ್ಟಿಯಿಂದ ಅರ್ಹರನ್ನು ಆಯ್ಕೆ ಮಾಡಿ ಸಂದರ್ಶನಕ್ಕೆ ಕರೆಯಲಿದೆ.

ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವಧಿ ಜೂನ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದೊಂದಿಗೆ ರಾಹುಲ್ ದ್ರಾವಿಡ್ ಕೋಚ್ ಅವಧಿ ಅಂತ್ಯಗೊಳ್ಳಲಿದೆ. ರಾಹುಲ್ ದ್ರಾವಿಡ್ ಮುಂದುವರಿಯಲು ಅರ್ಜಿ ಹಾಕಿಲ್ಲ. ಇತ್ತ ವಿವಿಎಸ್ ಲಕ್ಷ್ಮಣ್ ಸೇರಿದಂತೆ ಕೆಲ ದಿಗ್ಗಜ ಕ್ರಿಕೆಟಿಗರು ಕೋಚ್ ಹುದ್ದೆಯಿಂದ ದೂರ ಸರಿದಿದ್ದಾರೆ.

ಕೋಚ್ ಹುದ್ದೆಗೆ ಅರ್ಜಿ ಡೆಡ್‌ಲೈನ್ ಮುಕ್ತಾಯ: ಕಪ್ ಗೆಲ್ಲುವ ಮುಂಚೆ ಬಿಸಿಸಿಐಗೆ ಕಂಡೀಷನ್ ಹಾಕಿದ್ದ ಗಂಭೀರ್!
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!