
ದುಬೈ(ಅ.26): ಬಿಸಿಸಿಐ ನೂತನ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಸನ್ಮಾನ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಪಾಲ್ಗೊಂಡಿದ್ದರು. ಇಬ್ಬರು ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗರು. ಇದೀಗ ಇವರಿಬ್ಬರ ಫೋಟೋವನ್ನು ಶೇರ್ ಮಾಡಿದ ಐಸಿಸಿ, ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದಾದರೆ ಯಾರನ್ನು ಎಂದು ಪ್ರಶ್ನಿಸಿತ್ತು. ಇದಕ್ಕೆ ಭಾರತೀಯ ಅಭಿಮಾನಿಗಳು ಉತ್ತರಿಸಿದ್ದಾರೆ.
ಇದನ್ನೂ ಓದಿ: ICC ಖಜಾನೆಗೆ ಕೈ ಹಾಕಿದ ಗಂಗೂಲಿ; ಬೆಚ್ಚಿ ಬಿತ್ತು ಮಂಡಳಿ!
ಲಕ್ಷ್ಮಣ್ ಹಾಗೂ ಗಂಗೂಲಿ ಇಬ್ಬರಲ್ಲಿ ಒಬ್ಬರ ಆಯ್ಕೆ ಕಷ್ಟ. ಇಬ್ಬರೂ ದಿಗ್ಗಜ ಕ್ರಿಕೆಟಿಗರು. ಇಬ್ಬರ ಕೂಡುಗೆ ಅಮೂಲ್ಯವಾಗಿದೆ ಎಂದು ಅಭಿಮಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಕೆಲವರು ಏಕದಿನಕ್ಕೆ ಗಂಗೂಲಿ, ಟೆಸ್ಟ್ಗೆ ಲಕ್ಷ್ಮಣ್ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.