
ನವದೆಹಲಿ(ನ.18): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ತಮ್ಮ ಹೇಳಿಕೆಗಳಿಂದ ಹಲವು ಬಾರಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದೀಗ ಗಂಭೀರ್ 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಎಂ.ಎಸ್.ಧೋನಿಯಿಂದ ಶತಕ ಕೈತಪ್ಪಿತು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ನಲ್ಲಿ ಶತಕ ತಪ್ಪಿಸಿದ್ದೇ ಧೋನಿ..! ’ಗಂಭೀರ’ ಆರೋಪ
2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನನ್ನ ಬ್ಯಾಟಿಂಗ್ ಕುರಿತು ಹಲವು ಬಾರಿ ಪ್ರಶ್ನೆಗಳನ್ನು ಕೇಳಿದ್ದಾರೆ. 97 ರನ್ ಸಿಡಿಸಿ ಮುನ್ನುಗ್ಗುತ್ತಿದ್ದ ವೇಳೆ ಶತಕ ಕೈತಪ್ಪಿದ್ದು ಹೇಗೆ ಎಂದು ಕೇಳಿದ್ದಾರೆ. ಇದಕ್ಕೆ ಕಾರಣ, 97 ರನ್ ಪೂರೈಸಿದಾಗ ನಾನ್ ಸ್ಟ್ರೈಕ್ನಲ್ಲಿದ್ದ ಧೋನಿ ಶತಕಕ್ಕೆ 3 ರನ್ ಮಾತ್ರ ಬಾಕಿ, ಹೀಗಾಗಿ 3 ರನ್ ಸಿಡಿಸಿ ಸೆಂಚುರಿ ಪೂರೈಸಲು ಸೂಚಿಸಿದರು. ಶ್ರೀಲಂಕಾ ನೀಡಿದ ಗುರಿ ಬೆನ್ನಟ್ಟುವುದೇ ನನ್ನ ಟಾರ್ಗೆಟ್ ಆಗಿತ್ತು. ಧೋನಿಯ ಮಾತಿನಿಂದ ನನ್ನ ಗಮನ ಶತಕದತ್ತ ಕೇಂದ್ರೀಕೃತವಾಯಿತು. ಹೀಗಾಗಿ 3 ರನ್ ಪೂರೈಸಲು ಹೊಡೆದ ಶಾಟ್, ಮಿಸ್ಸಾಗಿ ವಿಕೆಟ್ ಕೈಚೆಲ್ಲಿದೆ ಎಂದಿದ್ದಾರೆ.
ಇದನ್ನೂ ಓದಿ: ಮೀಟಿಂಗ್ಗೆ ಚಕ್ಕರ್, ಕಮೆಂಟರಿಗೆ ಹಾಜರ್; ಗಂಭೀರ್ ಕಾಲೆಳೆದ ಫ್ಯಾನ್ಸ್!
ಗಂಭೀರ್ ಹೇಳಿಕೆಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಧೋನಿಯಿಂದ ಶತಕ ಕೈತಪ್ಪಿತು ಎನ್ನುವುದಾದರೆ, ಆ ಶತಕಕ್ಕೆ ನೀವು ಅರ್ಹರಲ್ಲ. ಇಲ್ಲ ಸಲ್ಲದ ಹೇಳಿಕೆ ನೀಡಿ ನಿಮ್ಮ ಘನತೆಯನ್ನು ಕಳೆದುಕೊಳ್ಳಬೇಡಿ ಎಂದು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.