ಫಿನ್ ಆ್ಯಲನ್‌ ಸಿಡಿಲಬ್ಬರದ ಬ್ಯಾಟಿಂಗ್‌: ಚಿನ್ನ ಹುಡುಕುತ್ತಿದ್ದ ಆರ್‌ಸಿಬಿಗೆ ವಜ್ರವೇ ಸಿಕ್ಕಂತಾಯ್ತು..!

Published : Apr 02, 2021, 09:31 AM ISTUpdated : Apr 02, 2021, 09:37 AM IST
ಫಿನ್ ಆ್ಯಲನ್‌ ಸಿಡಿಲಬ್ಬರದ ಬ್ಯಾಟಿಂಗ್‌: ಚಿನ್ನ ಹುಡುಕುತ್ತಿದ್ದ ಆರ್‌ಸಿಬಿಗೆ ವಜ್ರವೇ ಸಿಕ್ಕಂತಾಯ್ತು..!

ಸಾರಾಂಶ

ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಿಕೊಂಡ ನ್ಯೂಜಿಲೆಂಡ್‌ ಯುವ ಬ್ಯಾಟ್ಸ್‌ಮನ್‌ ಫಿನ್ ಆ್ಯಲನ್ ಬಾಂಗ್ಲಾದೇಶ ವಿರುದ್ದ ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಫಿಟ್‌ ಆಟ ನೋಡಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಆಕ್ಲೆಂಡ್‌(ಏ.02): ಆರ್‌ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಗೊಂಡಿರುವ ನ್ಯೂಜಿಲೆಂಡ್‌ನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಫಿನ್‌ ಆ್ಯಲನ್‌, ಗುರುವಾರ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ನಡೆಸಿದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕ ಚಚ್ಚುವ ಮೂಲಕ ನ್ಯೂಜಿಲೆಂಡ್‌ ಪರ ಎರಡನೇ ಅತಿವೇಗದ ಟಿ20 ಅರ್ಧಶತಕ ಬಾರಿಸಿದ ದಾಖಲೆಗೆ ಫಿನ್‌ ಭಾಜನರಾಗಿದ್ದಾರೆ.

ಕೇವಲ 29 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 71 ರನ್‌ ಚಚ್ಚಿದರು. 244.83ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಆ್ಯಲನ್‌ ಆಟ, ಆರ್‌ಸಿಬಿ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿತು. ಐಪಿಎಲ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ಆ್ಯಲನ್‌ ಈ ರೀತಿಯ ಲಯ ಪ್ರದರ್ಶಿಸಿದ್ದನ್ನು ಕಂಡು ಸಾಮಾಜಿಕ ತಾಣಗಳಲ್ಲಿ ಆರ್‌ಸಿಬಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಟಿ20 ಕ್ರಿಕೆಟಲ್ಲಿ ಆ್ಯಲನ್‌ ಸ್ಟ್ರೈಕ್‌ರೇಟ್‌ 187.68 ಇದ್ದು, ಅವರ ಮೇಲೆ ಆರ್‌ಸಿಬಿ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. 

14ನೇ ಐಪಿಎಲ್‌ಗೂ ಮುನ್ನ ಆರ್‌ಸಿಬಿಗೆ ಬಿಗ್‌ ಶಾಕ್‌: ಆಸೀಸ್‌ ಸ್ಫೋಟಕ ಬ್ಯಾಟ್ಸ್‌ಮನ್‌ ಟೂರ್ನಿಯಿಂದ ಔಟ್‌..!

14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಆಸ್ಟ್ರೇಲಿಯಾದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಜೋಶುವಾ ಫಿಲಿಪಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರಯ ತಂಡದಿಂದ ಹೊರಗುಳಿಯುವ ತೀರ್ಮಾನ ತೆಗೆದುಕೊಂಡಿದ್ದರು. ಫಿಲಿಪಿಯನ್ನು ಆರ್‌ಸಿಬಿ ಕೇವಲ 20 ಲಕ್ಷ ರುಪಾಯಿಗೆ ಖರೀದಿಸಿ 14ನೇ ಆವೃತ್ತಿಯ ಐಪಿಎಲ್‌ನಲ್ಲಿ ರೀಟೈನ್‌ ಮಾಡಿಕೊಂಡಿತ್ತು. ಇದೀಗ ಫಿಲಿಪಿ ಐಪಿಎಲ್‌ನಿಂದ ಹಿಂದೆ ಸರಿದಿದ್ದರಿಂದ ಅದೇ ಬೆಲೆಗೆ ನ್ಯೂಜಿಲೆಂಡ್‌ ಯುವ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆರ್‌ಸಿಬಿ ತಂಡ ಕೂಡಿಕೊಂಡಿದ್ದಾರೆ. ಫಿನ್‌ ಅಬ್ಬರ ಕಂಡು ಆರ್‌ಸಿಬಿ ಅಭಿಮಾನಿಗಳು ಪುಳಕಿತರಾಗಿದ್ದಾರೆ.

ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್‌ 09ರಿಂದ ಆರಂಭವಾಗಲಿದ್ದು, ಚೆನ್ನೈನ ಎಂ. ಎ. ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಗಳು ಉದ್ಘಾಟನಾ ಪಂದ್ಯವನ್ನು ಆಡಲಿವೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧೋನಿ ರಿಟೈರ್ ಆದ ದಿನವೇ ರೈನಾ ಯಾಕೆ ನಿವೃತ್ತಿ ಘೋಷಿಸಿದ್ರು? ಕಾರಣ ಕೇಳಿ ಶಾಕ್ ಆಗಿದ್ದರಂತೆ 'ತಲಾ'!
242 ರನ್ ಚಚ್ಚಿ ದೇಶಿ ಕ್ರಿಕೆಟ್ ಆಳಿದ ಹೀರೋ, ಜೈಲು ಸೇರಿದ್ದು ಹೇಗೆ? ಸಾಯುವಂತಿದ್ದ ಟೀಂ ಇಂಡಿಯಾ ಆಟಗಾರನಿಗೆ ಜೀವ ಕೊಟ್ಟಿದ್ದು RCB ಆಟಗಾರ ಕೊಟ್ಟ ಆ ಚೆಕ್!