
ನವದೆಹಲಿ[ನ.17]: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸದ್ಯ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಏಕದಿನ ವಿಶ್ವಕಪ್ ಸೆಮಿಫೈನಲ್ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಆಡದ ಧೋನಿ, ಬೇರೆ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.
ಶನಿವಾರ ಭಾರತ ತಂಡದ ಬ್ಯಾಟ್ಸ್ಮನ್ ಕೇದಾರ್ ಜಾಧವ್, ಮಾಜಿ ವೇಗಿ ಆರ್.ಪಿ.ಸಿಂಗ್ ಜತೆ ಗಾಲ್ಫ್ ಆಡಿ ಕಾಲ ಕಳೆದರು. ಗಾಲ್ಫ್ ಕೋರ್ಸ್ನಲ್ಲಿರುವ ಫೋಟೋವನ್ನು ಜಾಧವ್ ಟ್ವೀಟ್ ಮಾಡಿದ್ದು, ಫೋಟೋ ವೈರಲ್ ಆಗಿದೆ. ಧೋನಿ ಇತ್ತೀಚೆಗೆ ರಾಂಚಿಯ ರಾಜಕಾರಣಿಯೊಬ್ಬರ ಜತೆ ಸ್ನೂಕರ್ ಆಡಿದ್ದರು. ಜತೆಗೆ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಟೆನಿಸ್ ಟೂರ್ನಿಯಲ್ಲಿ ಪಾಲ್ಗೊಂಡು ಗೆದ್ದಿದ್ದರು.
ನಾಲ್ಕು ತಿಂಗಳ ಬಳಿಕ ಕ್ರಿಕೆಟ್ ಮೈದಾನಕ್ಕಿಳಿದ ಧೋನಿ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ನಾಲ್ಕು ತಿಂಗಳ ಬಳಿಕ ನೆಟ್ಸ್ಗೆ ಮರಳಿದ್ದಾರೆ. ಆದರೂ ಅವರು ಡಿ.6ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.