ಕೇದಾರ್‌ ಜತೆ ಗಾಲ್ಫ್ ಆಡಿದ ಧೋನಿ

Published : Nov 17, 2019, 10:02 AM IST
ಕೇದಾರ್‌ ಜತೆ ಗಾಲ್ಫ್ ಆಡಿದ ಧೋನಿ

ಸಾರಾಂಶ

ವಿಶ್ವಕಪ್ ಬಳಿಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವ ಮಹೇಂದ್ರ ಸಿಂಗ್ ಧೋನಿ ಕೊನೆಗೂ ಬ್ಯಾಟ್ ಹಿಡಿದು ಅಭ್ಯಾಸ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಕೇದಾರ್ ಜಾಧವ್ ಹಾಗೂ ಆರ್.ಪಿ. ಸಿಂಗ್ ಜತೆ ಗಾಲ್ಫ್ ಆಡಿ ಸಂಭ್ರಮಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ[ನ.17]:  ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಸದ್ಯ ಕ್ರಿಕೆಟ್‌ನಿಂದ ದೂರ ಉಳಿ​ದಿ​ದ್ದಾರೆ. ಏಕ​ದಿನ ವಿಶ್ವ​ಕಪ್‌ ಸೆಮಿ​ಫೈ​ನಲ್‌ ಬಳಿಕ ಸ್ಪರ್ಧಾ​ತ್ಮಕ ಕ್ರಿಕೆಟ್‌ನಲ್ಲಿ ಆಡದ ಧೋನಿ, ಬೇರೆ ಕ್ರೀಡೆಗಳ​ಲ್ಲಿ ತಮ್ಮನ್ನು ತೊಡ​ಗಿ​ಸಿ​ಕೊ​ಳ್ಳು​ತ್ತಿ​ದ್ದಾರೆ. 

ಶನಿ​ವಾರ ಭಾರತ ತಂಡದ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌, ಮಾಜಿ ವೇಗಿ ಆರ್‌.ಪಿ.​ಸಿಂಗ್‌ ಜತೆ ಗಾಲ್ಫ್ ಆಡಿ ಕಾಲ ಕಳೆ​ದರು. ಗಾಲ್ಫ್ ಕೋರ್ಸ್‌ನಲ್ಲಿ​ರುವ ಫೋಟೋ​ವನ್ನು ಜಾಧವ್‌ ಟ್ವೀಟ್‌ ಮಾಡಿದ್ದು, ಫೋಟೋ ವೈರಲ್‌ ಆಗಿದೆ. ಧೋನಿ ಇತ್ತೀ​ಚೆಗೆ ರಾಂಚಿಯ ರಾಜ​ಕಾ​ರಣಿಯೊಬ್ಬರ ಜತೆ ಸ್ನೂಕರ್‌ ಆಡಿದ್ದರು. ಜತೆಗೆ ಜಾರ್ಖಂಡ್‌ ಕ್ರಿಕೆಟ್‌ ಸಂಸ್ಥೆ ಆಯೋ​ಜಿ​ಸಿದ್ದ ಟೆನಿಸ್‌ ಟೂರ್ನಿ​ಯಲ್ಲಿ ಪಾಲ್ಗೊಂಡು ಗೆದ್ದಿ​ದ್ದರು.
ನಾಲ್ಕು ತಿಂಗಳ ಬಳಿಕ ಕ್ರಿಕೆಟ್ ಮೈದಾನಕ್ಕಿಳಿದ ಧೋನಿ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌ ಧೋನಿ ನಾಲ್ಕು ತಿಂಗಳ ಬಳಿಕ ನೆಟ್ಸ್‌ಗೆ ಮರಳಿದ್ದಾರೆ. ಆದರೂ ಅವ​ರು ಡಿ.6ರಿಂದ ಆರಂಭವಾಗಲಿರುವ ವೆಸ್ಟ್‌ ಇಂಡೀಸ್‌ ವಿರು​ದ್ಧದ ಸರಣಿಗೆ ಲಭ್ಯವಿರುವುದಿಲ್ಲ ಎಂದು ಬಿಸಿ​ಸಿಐ ಅಧಿ​ಕಾ​ರಿ​ಯೊ​ಬ್ಬರು ತಿಳಿ​ಸಿ​ದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಂದ್ಯಕ್ಕೂ ಮೊದಲು ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಗೌರವ ನಮನ ಸೂಚಿಸಿದ ಆರ್‌ಸಿಬಿ
IPL 2026: ಮುಂಬೈ ಎದುರಿನ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ ಒಂದು ಮೇಜರ್ ಚೇಂಜ್; ಪಾಂಡ್ಯ ಪಡೆಯಲ್ಲಿ ಎರಡು ಬದಲಾವಣೆ?