
ನವದೆಹಲಿ(ಜ.12): ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ ಉಳಿದಿರುವ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ನಡೆಯನ್ನು ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.
ಟಿ20 ವಿಶ್ವಕಪ್ ತಂಡದಲ್ಲಿ ಧೋನಿ ಯಾಕಿರಬೇಕು? ಇಲ್ಲಿದೆ 3 ಕಾರಣ!
‘ಯಾರಾದರೂ ಭಾರತ ತಂಡದಿಂದ ಇಷ್ಟೊಂದು ದಿನ ದೂರವಿರಲು ಬಯಸುತ್ತಾರೆಯೇ?’ ಎಂದು ಗವಾಸ್ಕರ್ ಪ್ರಶ್ನೆ ಮಾಡಿದ್ದಾರೆ. ಧೋನಿ ಕ್ರಿಕೆಟ್ ಭವಿಷ್ಯದ ಬಗ್ಗೆ 26ನೇ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮರಣಾರ್ಥ ಉಪನ್ಯಾಸದ ವೇಳೆ ಮಾತನಾಡಿದ ಗವಾಸ್ಕರ್, ‘ಫಿಟ್ನೆಸ್ ಬಗ್ಗೆ ಧೋನಿಯನ್ನೇ ಕೇಳಬೇಕು. ಕಳೆದ ವರ್ಷ ಜುಲೈ 9ರಿಂದ ಅವರು ತಂಡಕ್ಕೆ ಅಲಭ್ಯರಾಗಿದ್ದಾರೆ. ಅವರ ನಡೆ ಬಗ್ಗೆ ಪ್ರಶ್ನಿಸಬೇಕು’ ಎಂದಿದ್ದಾರೆ.
ಧೋನಿ ನಿವೃತ್ತಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರವಿಶಾಸ್ತ್ರಿ..!
2019ರ ಐಸಿಸಿ ಏಕದಿನ ವಿಶ್ವಕಪ್ ಮುಕ್ತಾಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್'ನಿಂದ ದೂರವೇ ಉಳಿದಿದ್ದಾರೆ. ಇನ್ನು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ, ಧೋನಿ ಸದ್ಯದಲ್ಲೇ ಏಕದಿನ ಕ್ರಿಕೆಟ್'ಗೆ ಗುಡ್ ಬೈ ಹೇಳಲಿದ್ದಾರೆ ಎಂದಿದ್ದರು. ಅಲ್ಲದೇ ಐಪಿಎಲ್ ಟೂರ್ನಿಯಲ್ಲಿ ಧೋನಿ ಆಡಲಿದ್ದಾರೆ ಎಂದು ಕೂಡ ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.