ಜಾವಗಲ್ ಶ್ರೀನಾಥ್‌ಗೆ ಪದ್ಮಶ್ರೀ ನೀಡಲು ಜಾಲತಾಣಗಳಲ್ಲಿ ಒತ್ತಾಯ

Suvarna News   | Asianet News
Published : Jul 25, 2020, 07:08 PM IST
ಜಾವಗಲ್ ಶ್ರೀನಾಥ್‌ಗೆ ಪದ್ಮಶ್ರೀ ನೀಡಲು ಜಾಲತಾಣಗಳಲ್ಲಿ ಒತ್ತಾಯ

ಸಾರಾಂಶ

ದಶಕಗಳ ಕಾಲ ಟೀಂ ಇಂಡಿಯಾ ಬೌಲಿಂಗ್ ಸಾರಥ್ಯ ವಹಿಸಿದ್ದ ಜಾವಗಲ್ ಶ್ರೀನಾಥ್ ಅವರಿಗೆ ದೇಶದ ನಾಲ್ಕನೇ ಅತ್ಯುಚ್ಚ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದಕ್ಕೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಸಹ ದ್ವನಿ ಗೂಡಿಸಿದ್ದಾರೆ, ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.25): ಭಾರತದ ಮಾಜಿ ವೇಗದ ಬೌಲರ್‌ ಜಾವಗಲ್‌ ಶ್ರೀನಾಥ್‌ಗೆ ದೇಶದ 4ನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. 

ಟ್ವೀಟರ್‌ನಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್‌ ಕೂಡ ಧ್ವನಿ ಎತ್ತಿದ್ದಾರೆ. ಶ್ರೀನಾಥ್‌ಗೆ ಪದ್ಮಶ್ರೀ ಗೌರವ ನೀಡಲು ಕೇಂದ್ರ ಸರ್ಕಾರ ಶಿಫಾರಸು ಮಾಡಬೇಕು ಎಂದು ದೊಡ್ಡ ಗಣೇಶ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗಣೇಶ್‌, ದಯವಿಟ್ಟು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಶ್ರೀನಾಥ್‌ರನ್ನು ಶಿಫಾರಸುಗೊಳಿಸಿ, ಇದಕ್ಕೆ ನಿಜವಾಗಿಯೂ ಅವರು ಅರ್ಹರಾಗಿದ್ದಾರೆ ಎಂದಿದ್ದಾರೆ. ಶ್ರೀನಾಥ್‌ 13 ವರ್ಷ ಭಾರತ ತಂಡದಲ್ಲಿ ಅದ್ಭುತ ಸಾಧನೆ ಮಾಡಿದ್ದರೂ, ಯಾವುದೇ ಪ್ರತಿಷ್ಠಿತ ಗೌರವ ಪಡೆದಿಲ್ಲ.

ಜಾವಗಲ್ ಶ್ರೀನಾಥ್‌ಗೆ ಸಾಧನೆಗೆ ತಕ್ಕ ಗೌರವ ಸಿಕ್ಕಿಲ್ಲವೆಂದ ಆಫ್ರಿಕಾ ಮಾಜಿ ವೇಗಿ..!

ಮೈಸೂರು ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಭಾರತ ಪರ 229  ಏಕದಿನ ಪಂದ್ಯಗಳನ್ನಾಡಿ 315 ವಿಕೆಟ್ ಕಬಳಿಸಿದ್ದಾರೆ. ಇದರ ಜತೆಗೆ ಏಕದಿನ ಕ್ರಿಕೆಟ್‌ನಲ್ಲಿ ಮುನ್ನೂರಕ್ಕೂ ಅಧಿಕ ವಿಕೆಟ್‌ ಕಬಳಿಸಿದ ಭಾರತದ ಏಕೈಕ ಬೌಲರ್ ಎನ್ನುವ ಹೆಗ್ಗಳಿಗೆ ಇಂದಿಗೂ ಶ್ರೀನಾಥ್ ಹೆಸರಿನಲ್ಲಿದೆ. ಇನ್ನು 67 ಟೆಸ್ಟ್ ಪಂದ್ಯವನ್ನಾಡಿ 236 ವಿಕೆಟ್ ಕಬಳಿಸಿದ್ದರು. ಇದು ಅಂಕಿ ಸಂಖ್ಯೆಗಳಾದರೆ ಕೆಲವೊಮ್ಮೆ ಭಾರತದ ಸ್ಮರಣೀಯ ಗೆಲುವಿಗೂ ಶ್ರೀನಾಥ್ ಸಾಕ್ಷಿಯಾಗಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಎಸ್‌ಸಿಎ ಚುನಾವಣೆ: ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ಭಾರತ-ಆಫ್ರಿಕಾ ಫೈನಲ್ ಫೈಟ್: ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?