Gautam Gambhir: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಐಸಿಸಿ ಉಗ್ರರಿಂದ ಜೀವಬೆದರಿಕೆ..!

Suvarna News   | Asianet News
Published : Nov 24, 2021, 12:13 PM ISTUpdated : Nov 24, 2021, 01:10 PM IST
Gautam Gambhir: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಐಸಿಸಿ ಉಗ್ರರಿಂದ ಜೀವಬೆದರಿಕೆ..!

ಸಾರಾಂಶ

* ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ * ಐಸಿಸ್ ಕಾಶ್ಮೀರ್ ಉಗ್ರರಿಂದ ಬಿಜೆಪಿ ಸಂಸದನಿಗೆ ಪ್ರಾಣ ಬೆದರಿಕೆ * ದೆಹಲಿ ಪೊಲೀಸರಲ್ಲಿ ಭದ್ರತೆಗೆ ಮನವಿ ಮಾಡಿಕೊಂಡ ಮಾಜಿ ಕ್ರಿಕೆಟಿಗ

ನವದೆಹಲಿ(ನ.24): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ (Former Team India Cricketer) ಹಾಗೂ ಬಿಜೆಪಿ ಸಂಸದ (BJP MP) ಗೌತಮ್‌ ಗಂಭೀರ್‌ಗೆ ಕಾಶ್ಮೀರ್ ಐಸಿಸ್ ಉಗ್ರರಿಂದ ಜೀವ ಬೆದರಿಕೆ ಬಂದಿದೆ. ಇದರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದ ಗೌತಮ್ ಗಂಭೀರ್ (Gautam Gambhir), ದೆಹಲಿ ಪೊಲೀಸರಲ್ಲಿ ದೂರ ದಾಖಲಿಸಿದ್ದಾರೆ. ಗಂಭೀರ್‌ಗೆ ಜೀವ ಬೆದರಿಕೆ (Death Threat) ಬಂದಿರುವ ರಾಜಕೀಯ ವಲಯದಲ್ಲಿ ಸಂಚಲನಕ್ಕೀಡು ಮಾಡಿಕೊಟ್ಟಿದೆ. ಗೌತಮ್ ಗಂಭೀರ್ ಅವರ ಅಧಿಕೃತ ಇ-ಮೇಲ್‌ಗೆ ಜೀವ ಬೆದರಿಕೆ ಬಂದಿದೆ.

ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರಲ್ಲಿ (Delhi Police) ದೂರು ದಾಖಲಿಸಿದ್ದಾರೆ. ಇದರ ಜತೆಗೆ ತಮಗೆ ಹೆಚ್ಚುವರಿ ಭದ್ರತೆ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ಗೌತಮ್ ಗಂಭೀರ್ ಅಧಿಕೃತ  ಇ-ಮೇಲ್ (Email) ಖಾತೆಯ ಮೂಲಕ ಐಸಿಸ್ ಕಾಶ್ಮೀರ್ (ISIS Kashmir) ಹೆಸರಿನಲ್ಲಿ ಉಗ್ರರು ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಸದ ಹಾಗೂ ಅವರ ಕುಟುಂಬದ ಮೇಲೆ ಜೀವಬೆದರಿಕೆ ಹಾಕಲಾಗಿದೆ. ಹೀಗಾಗಿ ಈ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೆಂಟ್ರಲ್ ಡಿಸ್ಟ್ರಿಕ್ಟ್ ಡಿಸಿಪಿಗೆ ಗೌತಮ್ ಗಂಭೀರ್ ಅವರ ಆಪ್ತ ಸಹಾಯಕ ಗೌರವ್ ಅರೋರಾ ಮನವಿ ಮಾಡಿಕೊಂಡಿದ್ದರು.

ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಐಸಿಸ್ ಕಾಶ್ಮೀರ್ ಉಗ್ರರಿಂದ ಜೀವ ಬೆದರಿಕೆ ಹಾಕಲಾಗಿದೆ ಎಂದು ಗೌತಮ್ ಗಂಭೀರ್ ಡೆಲ್ಲಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣದ ತನಿಖೆ ಆರಂಭವಾಗಿದೆ. ಗೌತಮ್ ಗಂಭೀರ್ ನಿವಾಸದ ಬಳಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಡಿಸಿಪಿ ಶ್ವೇತಾ ಚೌಹ್ಹಾಣ್ ತಿಳಿಸಿದ್ದಾರೆ. ಗೌತಮ್ ಗಂಭೀರ್ ಪರವಾಗಿ ಅವರ ಆಪ್ತ ಸಹಾಯಕ ಗೌರವ್ ಅರೋರಾ ನೀಡಿದ ದೂರಿನ ಅನ್ವಯ ಪ್ರಕರಣದ ಕುರಿತಂತೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. 40 ವರ್ಷದ ಗೌತಮ್ ಗಂಭೀರ್ ಹಲವು ಸಂದರ್ಭಗಳಲ್ಲಿ ಉಗ್ರವಾದದ ಕುರಿತಂತೆ ಗಟ್ಟಿ ಧ್ವನಿಯಲ್ಲಿ ಖಂಡಿಸಿದ್ದಾರೆ.

IPL 2022: ಈ ಐವರು ಬ್ಯಾಟರ್‌ಗಳು RCB ಪರ ಎಬಿ ಡಿವಿಲಿಯರ್ಸ್‌ ಸ್ಥಾನ ತುಂಬಬಲ್ಲರು..!

ಟೀಂ ಇಂಡಿಯಾ (Team India) ಎಡಗೈ ಬ್ಯಾಟರ್‌ ಗೌತಮ್ ಗಂಭೀರ್, ಭಾರತ ಹಾಗೂ ಪಾಕ್‌ (Indo-Pak Border) ಗಡಿಯಲ್ಲಿ ನಡೆಯುತ್ತಿರುವ ಪಾಕ್ ಪ್ರೇರಿತ ಭಯೋತ್ಪಾದನೆಯ ಕುರಿತಂತೆ ಪದೇ ಪದೇ ಧ್ವನಿಯೆತ್ತುತ್ತಲೇ ಬಂದಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಗೌತಮ್ ಗಂಭೀರ್, ಗಡಿಯಲ್ಲಿ ಪಾಕ್ ಪ್ರೇರಿತ ಭಯೋತ್ಫಾದನೆ (cross-border terrorism) ನಿಲ್ಲುವವರೆಗೂ ಪಾಕಿಸ್ತಾನದ ಜತೆ ಯಾವುದೇ ವ್ಯಾಪಾರ ವಹಿವಾಟುಗಳನ್ನು ಇಟ್ಟುಕೊಳ್ಳಬಾರದು ಎಂದು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಭಾರತ ಸೈನಿಕರ ಜೀವಕ್ಕಿಂತ ಮಹತ್ವವಾದ್ದದ್ದೂ ಬೇರೇನು ಇಲ್ಲ ಎಂದು ಹೇಳಿದ್ದರು.

IND vs NZ:ಗಂಟೆ ಬಾರಿಸಿ ಪಂದ್ಯಕ್ಕೆ ಚಾಲನೆ ನೀಡಿದ ಗಂಗೂಲಿಗೆ ಟ್ರೋಫಿ ಗಿಫ್ಟ್, ರೋಹಿತ್ ನಾಯಕತ್ವಕ್ಕೆ ಸಲಾಮ್!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 2011ರ ಏಕದಿನ ವಿಶ್ವಕಪ್‌ ಹಾಗೂ 2007ರ ಟಿ20 ವಿಶ್ವಕಪ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗಂಭೀರ್ 2007ರ ಟಿ20 ಟಿ20 ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ದ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. ಇನ್ನು ಮುಂಬೈನ ವಾಂಖೆಡೆ ಮೈದಾನದಲ್ಲಿ 2011ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ದ 97 ರನ್‌ ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!