ರೈತರ ಪ್ರತಿಭಟನೆ: ತಂದೆ ಯೋಗರಾಜ್‌ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್..!

Suvarna News   | Asianet News
Published : Dec 12, 2020, 11:37 AM IST
ರೈತರ ಪ್ರತಿಭಟನೆ: ತಂದೆ ಯೋಗರಾಜ್‌ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್..!

ಸಾರಾಂಶ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ಹುಟ್ಟುಹಬ್ಬದ ದಿನದಂದೇ ತಮ್ಮ ತಂದೆಯ ಹೇಳಿಕೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.

ನವದೆಹಲಿ(ಡಿ.12): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು(ಡಿ.12) ತಮ್ಮ 39 ವಸಂತಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ನೀಡಿದ ಹೇಳಿಕೆ ಬಗ್ಗೆ ಯುವಿ ವಿಷಾದ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ತಂದೆಯ ತತ್ವಸಿದ್ದಾಂತ ಹಾಗೂ ತಮ್ಮ ಆಲೋಚನೆ ಒಂದೇ ಅಲ್ಲ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ತಮ್ಮ ಹುಟ್ಟುಹಬ್ಬದ ದಿನದಂದೇ ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ರೈತರು ನಮ್ಮ ದೇಶದ ಜೀವನಾಡಿಗಳಿದ್ದಂತೆ. ಯಾವುದೇ ಸಂಘರ್ಷವಿಲ್ಲದೇ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ ಯುವಿ ತಂದೆ ಯೋಗರಾಜ್ ಸಿಂಗ್ ರೈತರ ಬೇಡಿಕೆಗೆ ಕೇಂದ್ರ ಸರ್ಕಾರ ತಲೆಬಾಗಬೇಕು. ಇದರ ಜತೆಗೆ  ಕ್ರೀಡಾಪಟುಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪ್ರಶಸ್ತಿಗಳನ್ನು ವಾಪಾಸ್ ಮಾಡಬೇಕು ಎಂದು ಆಗ್ರಹಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರದ ಕೆಲವು ಸಚಿವರು ಹಾಗೂ ಪ್ರಧಾನಿ ಮೋದಿ ಮುಖಗಳು ನಮಗೆ ದೆವ್ವದ ಮುಖಗಳಂತೆ ಬಾಸವಾಗುತ್ತಿವೆ. ಯಾವುದೇ ಭದ್ರತೆಯಿಲ್ಲದೇ ಪ್ರತಿಭಟನೆ ನಡೆಸುತ್ತಿರುವ ರೈತರ ನಡುವೆ ಬಗ್ಗೆ ಆಮೇಲೆ ಪರಿಸ್ಥಿತಿ ಏನಾಗುತ್ತೆ ಎಂದು ನೋಡೋಣ ಎಂದು ಪ್ರಧಾನಿ ಮೋದಿಗೆ ಯೋಗರಾಜ್ ಸಿಂಗ್ ಸವಾಲೆಸೆದಿದ್ದರು.

ರೈತರ ಪ್ರತಿಭಟನೆಗೆ ಕೈ ಜೋಡಿಸಿ ಮೋದಿ ವಿರುದ್ದ ಗುಡುಗಿದ ಯುವಿ ತಂದೆ..!

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವಿ, ತಮ್ಮ ತಂದೆ ಯೋಗರಾಜ್ ಸಿಂಗ್ ಹೇಳಿಕೆ ನೋವು ಹಾಗೂ ಬೇಸರವನ್ನುಂಟು ಮಾಡಿದೆ. ಈ ಬಗ್ಗೆ ಅವರೇ ಸರಿಯಾದ ಸ್ಪಷ್ಟನೆ ನೀಡಬೇಕಿದೆ. ನನ್ನ ಸಿದ್ದಾಂತಗಳೇ ಬೇರೆ ಅವರ ಸಿದ್ದಾಂತಗಳೇ ಬೇರೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಪ್ರತಿಯೊಬ್ಬರು ಕೋವಿಡ್ 19 ವಿರುದ್ದದ ಹೋರಾಟದಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಯಾಕೆಂದರೆ ಕೊರೋನಾ ಸೋಂಕಿನ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ನಾವೆಲ್ಲಾ ಎಚ್ಚರಿಕೆಯಿಂದ ಇದ್ದರೆ ಕೊರೋನಾ ಸೋಂಕನ್ನು ಸಂಪೂರ್ಣವಾಗಿ ಸೋಲಿಸಬಹುದು ಎಂದು ದೇಶದ ಜನತೆಗೆ ಯುವಿ ಕರೆ ಕೊಟ್ಟಿದ್ದಾರೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!