ಟೀಂ ಇಂಡಿಯಾ ಕ್ರಿಕೆಟಿಗ ಆರ್‌ ಪಿ ಸಿಂಗ್ ತಂದೆ ಕೋವಿಡ್‌ಗೆ ಬಲಿ..!

Suvarna News   | Asianet News
Published : May 12, 2021, 05:50 PM IST
ಟೀಂ ಇಂಡಿಯಾ ಕ್ರಿಕೆಟಿಗ ಆರ್‌ ಪಿ ಸಿಂಗ್ ತಂದೆ ಕೋವಿಡ್‌ಗೆ ಬಲಿ..!

ಸಾರಾಂಶ

* ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರುದ್ರ ಪ್ರತಾಪ್ ಸಿಂಗ್‌ ತಂದೆ ಕೋವಿಡ್‌ಗೆ ಬಲಿ * ಟ್ವೀಟ್‌ ಮೂಲಕ ತಂದೆಯ ಸಾವಿನ ವಿಚಾರ ತಿಳಿಸಿದ ಎಡಗೈ ವೇಗಿ * ಆರ್‌ ಪಿ ಸಿಂಗ್ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ ಹಿರಿಯ ಕ್ರಿಕೆಟಿಗರು

ನವದೆಹಲಿ(ಮೇ.12): ಕೋವಿಡ್‌ ಎರಡನೇ ಅಲೆಗೆ ಭಾರತ ಅಕ್ಷರಶಃ ಬೆಚ್ಚಿಬಿದ್ದಿದೆ. ಅದರಲ್ಲೂ ಯಾಕೋ ಏನೋ ಕೊರೋನಾ ಹೆಮ್ಮಾರಿ ಭಾರತ ಕ್ರಿಕೆಟ್‌ ತಂಡದ ಆಟಗಾರರ ಪೋಷಕರ ಮೇಲೆ ವಕ್ರದೃಷ್ಟಿ ಬೀರಿದಂತಿದೆ. ವೇದಾ ಕೃಷ್ಣಮೂರ್ತಿ ತಾಯಿ, ಪೀಯೂಸ್ ಚಾವ್ಲಾ ತಂದೆಯನ್ನು ಬಲಿಪಡೆದಿದ್ದ ಕೊರೋನಾ, ಇದೀಗ ಭಾರತ ತಂಡದ ಮಾಜಿ ಕ್ರಿಕೆಟಿಗ ರುದ್ರ ಪ್ರತಾಪ್ ಸಿಂಹ ಅವರ ತಂದೆಯನ್ನು ಆಪೋಶನ ಪಡೆದಿದೆ.

ಹೌದು, ಸ್ವತಃ ಈ ವಿಚಾರವನ್ನು ಆರ್‌ ಪಿ ಸಿಂಗ್ ಟ್ವೀಟ್‌ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಕೋವಿಡ್‌ನಿಂದ ಬಳಲುತ್ತಿದ್ದ ನಮ್ಮ ತಂದೆ ಶಿವಪ್ರಸಾದ್ ಸಿಂಗ್ ಇಂದು(ಮೇ.12) ಕೊನೆಯುಸಿರೆಳೆದಿದ್ದಾರೆ. ನನ್ನ ತಂದೆಯ ಆತ್ಮಕ್ಕೆ ಸಾಕ್ಷಿಸಿಗಲೆಂದು ನೀವು ಪ್ರಾರ್ಥಿಸಿ ಎಂದು ಟ್ವೀಟ್‌ ಮಾಡಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟಿಗ ಪೀಯೂಸ್ ಚಾವ್ಲಾ ತಂದೆ ಬಲಿ ಪಡೆದ ಕೊರೋನಾ..!

ರುದ್ರ ಪ್ರತಾಪ್ ಸಿಂಗ್ ತಂದೆಯ ನಿಧನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಪ್ರಗ್ಯಾನ್ ಓಜಾ, ಸುರೇಶ್ ರೈನಾ, ರಮೇಶ್ ಪೊವಾರ್ ಹಾಗೂ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಹರ್ಷಲ್ ಗಿಬ್ಸ್‌ ಟ್ವೀಟ್‌ ಮೂಲಕ ಕಂಬನಿ ಮಿಡಿದಿದ್ದಾರೆ.

ಆರ್‌ ಪಿ ಸಿಂಗ್ ಭಾರತ ಪರ 14 ಟೆಸ್ಟ್, 58 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನಾಡಿ ಕ್ರಮವಾಗಿ 40, 69 ಹಾಗೂ 15 ವಿಕೆಟ್ ಕಬಳಿಸಿದ್ದಾರೆ. 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್‌ ಪಟ್ಟ ಅಲಂಕರಿಸುವಲ್ಲಿ ಆರ್‌ ಪಿ ಸಿಂಗ್ ಮಹತ್ವದ ಪಾತ್ರ ನಿಭಾಯಿಸಿದ್ದರು. 35 ವರ್ಷದ ಎಡಗೈ ವೇಗಿ  2018ರ ಸೆಪ್ಟೆಂಬರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. 

ಸೋಮವಾರವಷ್ಟೇ ಟೀಂ ಇಂಡಿಯಾ ಮತ್ತೋರ್ವ ಆಟಗಾರ ಪೀಯೂಸ್ ಚಾವ್ಲಾ ತಂದೆ ಕೋವಿಡ್‌ಗೆ ಬಲಿಯಾಗಿದ್ದರು. ಇನ್ನು ಭಾರತ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಕೇವಲ 10 ದಿನಗಳ ಅಂತರದಲ್ಲಿ ತನ್ನ ತಾಯಿ ಚಲುವಾಂಬ ಹಾಗೂ ಸಹೋದರಿ ವತ್ಸಲ್‌ರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!
14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!