
ನವದೆಹಲಿ(ಜ.25): ಭಾರತ ತಂಡದ ಮಾಜಿ ವೇಗಿಗಳಾದ ಅಜಿತ್ ಅಗರ್ಕರ್ ಹಾಗೂ ವೆಂಕಟೇಶ್ ಪ್ರಸಾದ್ ಬಿಸಿಸಿಐ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ವಿಕೆಟ್ ಕೀಪರ್ ನಯಾನ್ ಮೋಂಗ್ಯಾ ಸಹ ಸ್ಪರ್ಧೆಯಲ್ಲಿದ್ದಾರೆ.
ಕೊಹ್ಲಿ ಬಾಯ್ಸ್ಗೆ ಸಿಗೋ ಆದಾಯ ನಿರೀಕ್ಷಿಸುವುದು ತಪ್ಪು; ಸ್ಮೃತಿ ಮಂಧನಾ
ಅಗರ್ಕರ್ ಆಯ್ಕೆಗಾರನ ಹುದ್ದೆ ಅಲಂಕರಿಸಲು ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೆಚ್ಚು ಅನುಭವ ಹೊಂದಿರುವ ಅವರು, ಆಯ್ಕೆಗಾರನಾಗಿ ಅನುಭವ ಸಹ ಹೊಂದಿದ್ದಾರೆ. ಅಗರ್ಕರ್ ಮುಂಬೈ ತಂಡದ ಆಯ್ಕೆಗಾರರಾಗಿದ್ದರು.
ಬಿಸಿಸಿಐ ಆಯ್ಕೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ L ಶಿವರಾಮಕೃಷ್ಣನ್
ನ್ಯಾ.ಲೋಧಾ ಸಮಿತಿ ಶಿಫಾರಸಿನ ಪ್ರಕಾರ ಕಿರಿಯ ಇಲ್ಲವೇ ಹಿರಿಯ ತಂಡದ ಆಯ್ಕೆಗಾರರಾಗಿ ಕೇವಲ 4 ವರ್ಷ ಕಾರ್ಯನಿರ್ವಹಿಸಲು ಅವಕಾಶವಿದೆ. ಕಿರಿಯರ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ವೆಂಕಟೇಶ್ ಪ್ರಸಾದ್ಗೆ ಒಂದೂವರೆ ವರ್ಷ ಮಾತ್ರ ಬಾಕಿ ಇರುವ ಕಾರಣ, ಅವರ ನೇಮಕ ಅನುಮಾನ ಎನ್ನಲಾಗಿದೆ.
ಅಗರ್ಕರ್ ಮಾತ್ರವಲ್ಲದೇ ಲಕ್ಷ್ಮಣ್ ಶಿವರಾಮಕೃಷ್ಣನ್ ಸಹಾ ಬಿಸಿಸಿಐ ಆಯ್ಕೆಗಾರರ ಹುದ್ದೆಯ ಪ್ರಬಲ ಸ್ಪರ್ಧಿಯಾಗಿದ್ದಾರೆ. ಒಟ್ಟಿನಲ್ಲಿ ಯಾರು ಎಂ.ಎಸ್.ಕೆ. ಪ್ರಸಾದ್ ಸ್ಥಾನವನ್ನು ತುಂಬಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಜನವರಿ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.