ಜಮ್ಮು&ಕಾಶ್ಮೀರದಲ್ಲಿ ಕ್ರಿಕೆಟ್ ಪ್ರಚಾರ ಮಾಡಿ ಎಂದು ಪತ್ರ ಬರೆದ ಸುರೇಶ್ ರೈನಾ..!

Suvarna News   | Asianet News
Published : Aug 26, 2020, 05:17 PM IST
ಜಮ್ಮು&ಕಾಶ್ಮೀರದಲ್ಲಿ ಕ್ರಿಕೆಟ್ ಪ್ರಚಾರ ಮಾಡಿ ಎಂದು ಪತ್ರ ಬರೆದ ಸುರೇಶ್ ರೈನಾ..!

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕಣಿವೆ ರಾಜ್ಯ ಜಮ್ಮು&ಕಾಶ್ಮೀರದಲ್ಲಿ ಕ್ರಿಕೆಟ್‌ಗೆ ಮತ್ತಷ್ಟು ಉತ್ತೇಜನ ನೀಡಬೇಕೆಂದು ಡಿಜಿಪಿಗೆ ಪತ್ರ ಬರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಆ.26): ಕೇಂದ್ರಾಡಳಿತ ಪ್ರದೇಶವಾದ ಜಮ್ಮು&ಕಾಶ್ಮೀರದಲ್ಲಿ ಕ್ರಿಕೆಟ್‌ನ್ನು ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ಅಲ್ಲಿ ಕ್ರಿಕೆಟ್‌ ಬಗ್ಗೆ ಆಸಕ್ತಿ ಇರುವ ಪ್ರತಿಭಾನ್ವಿತ ಯುವಕರಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ. 

ಕ್ರೀಡೆ ಯುವಕರಿಗೆ ಕೇವಲ ವೃತ್ತಿ ಬದುಕನ್ನು ರೋಪಿಸುವುದಿಲ್ಲ ಬದಲಾಗಿ ಜೀವನ ಶೈಲಿಯನ್ನೇ ಬದಲಾಯಿಸುತ್ತದೆ. ಹೀಗಾಗಿ ಈ ಬಗ್ಗೆ ಗಮನ ಹರಿಸಬೇಕೆಂದು ಜಮ್ಮು&ಕಾಶ್ಮೀರದ ಡಿಜಿಪಿ ದಿಲ್ಬಾಗ್‌ ಸಿಂಗ್ ಅವರಿಗೆ ಸುರೇಶ್ ರೈನಾ ಪತ್ರ ಬರೆದಿದ್ದಾರೆ. ನಾನು ತುಂಬಾ ನಿರೀಕ್ಷೆ ಹಾಗೂ ಭರವಸೆಗಳನ್ನಿಟ್ಟುಕೊಂಡು ಈ ಪತ್ರವನ್ನು ಬರೆಯುತ್ತಿದ್ದೇನೆ. ಜಮ್ಮು & ಕಾಶ್ಮೀರದಲ್ಲಿ ಕ್ರಿಕೆಟ್‌ನ್ನು ಹೆಚ್ಚು ಉತ್ತೇಜಿಸುವ ಮೂಲಕ ಅವಕಾಶವಂಚಿತ ಮಕ್ಕಳಿಗೆ ನೆರವಾಗಿ ಎಂದು ರೈನಾ ಮನವಿ ಮಾಡಿಕೊಂಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಮಾನಸಿಕ ಸ್ಥೈರ್ಯ, ದೈಹಿಕ ಫಿಟ್ನೆಸ್ ಹಾಗೂ ಕೌಶಲ್ಯ ತರಬೇತಿ ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ಬರುವಂತೆ ಮಾಡಬಹುದುದಾಗಿದೆ ಎಂದು ರೈನಾ ಹೇಳಿದ್ದಾರೆ. ಮುಂದುವರೆದು, ಯಾವುದೇ ಕ್ರೀಡೆಯಾಗಿರಲಿ ಮಕ್ಕಳಲ್ಲಿ ಶಿಸ್ತು ಹಾಗೂ ದೈಹಿಕ ಫಿಟ್ನೆಸ್‌ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದ್ದಾರೆ.

ಸುರೇಶ್ ರೈನಾ ಟೀಂ ಪ್ಲೇಯರ್ ಎಂದು ಗುಣಗಾನ ಮಾಡಿದ ರಾಹುಲ್ ದ್ರಾವಿಡ್

ಕ್ರಿಕೆಟ್ ಬರೀ ಒಂದು ಕ್ರೀಡೆಯಲ್ಲ, ಒಂದು ಒಂದು ಗುಂಪನ್ನು ಒಳಗೊಂಡು ಎಲ್ಲರ ಮೇಲೂ ಪ್ರಭಾವ ಬೀರುತ್ತದೆ. ಇದು ವ್ಯಕ್ತಿಯೊಬ್ಬನ ಶಿಸ್ತು ಹಾಗೂ ವೃತ್ತಿಪರತೆಯಿಂದಿರಲು ಪ್ರೇರೇಪಿಸುತ್ತದೆ. ಇದನ್ನೇ ಮುಂದೆ ಅವರೆಲ್ಲಾ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಇದು ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯದಿಂದಿರಲು ನೆರವಾಗುತ್ತದೆ ಎಂದು ಪತ್ರದಲ್ಲಿ ರೈನಾ ಉಲ್ಲೇಖಿಸಿದ್ದಾರೆ.

ಇಲ್ಲಿಯವರೆಗೆ ಪರ್ವೇಜ್ ರಸೂಲ್ ಮಾತ್ರ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಆಫ್‌ ಸ್ಪಿನ್ನರ್ ರಸೂಲ್ ಭಾರತ ಪರ ಒಂದು ಏಕದಿನ ಹಾಗೂ ಟಿ20 ಪಂದ್ಯವನ್ನಾಡಿದ್ದಾರೆ. ಆದರೆ ತಂಡದಲ್ಲಿ ರಸೂಲ್‌ಗೆ ಭದ್ರವಾಗಿ ನೆಲೆಯೂರಲು ಸಾಧ್ಯವಾಗಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ