ಚಾಂಪಿಯನ್ ಕ್ರಿಕೆಟಿಗ ಯುವಿಯನ್ನು ಅರಸಿ ಬಂತು ಮತ್ತೊಂದು ಕಪ್..!

Web Desk   | Asianet News
Published : Nov 26, 2019, 01:02 PM IST
ಚಾಂಪಿಯನ್ ಕ್ರಿಕೆಟಿಗ ಯುವಿಯನ್ನು ಅರಸಿ ಬಂತು ಮತ್ತೊಂದು ಕಪ್..!

ಸಾರಾಂಶ

ಅಬುದಾಬಿ ಟಿ10 ಲೀಗ್‌ನಲ್ಲಿ ಯುವರಾಜ್ ಸಿಂಗ್ ಪ್ರತಿನಿಧಿಸಿದ್ದ ಮರಾಠ ಅರೇಬಿಯನ್ಸ್ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಯುವ ಚಾಂಪಿಯನ್ ಆಟಗಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...  

ಬೆಂಗಳೂರು[ನ.26]: ಟಿ 10 ಲೀಗ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರತಿನಿಧಿಸಿದ ಮರಾಠ ಅರೇಬಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಚಾಂಪಿಯನ್ ಆಟಗಾರ ಯುವಿ ಮತ್ತೊಂದು ಚಾಂಪಿಯನ್ ತಂಡದ ಭಾಗವಾಗಿದ್ದಾರೆ.

ಆ ದಿನಗಳನ್ನು ನೆನಪಿಸಿದ ಜಹೀರ್ ಖಾನ್ ಯಾರ್ಕರ್..!

ಹೌದು, ಈ ಮೊದಲು ಅಂಡರ್ 19 ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ಏಕದಿನ ವಿಶ್ವಕಪ್, ಐಪಿಎಲ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಪ್ರತಿನಿಧಿಸಿದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿವೃತ್ತಿಯ ಬಳಿಕ ಇದೇ ಮೊದಲ ಬಾರಿಗೆ ಅಬುದಾಬಿ ಟಿ10 ಲೀಗ್ ಟೂರ್ನಿಯಲ್ಲಿ ಯುವಿ ಪಾಲ್ಗೊಂಡಿದ್ದರು. ಇದೀಗ ಯುವಿ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ತಾವೊಬ್ಬ ಲಕ್ಕಿ ಆಟಗಾರ ಎನ್ನುವುದನ್ನು ಎಡಗೈ ಬ್ಯಾಟ್ಸ್’ಮನ್ ಸಾಬೀತು ಮಾಡಿದ್ದಾರೆ.
ಟಾಸ್ ಗೆದ್ದ ಮರಾಠ ಅರೇಬಿಯನ್ಸ್ ತಂಡದ ನಾಯಕ ಡ್ವೇನ್ ಬ್ರಾವೋ ಹಾಲಿ ಚಾಂಪಿಯನ್ ತಂಡವಾದ ಡೆಕನ್ ಗ್ಲಾಡಿಯೇಟರ್ಸ್ ತಂಡವನ್ನು ಬ್ಯಾಟಿಂಗ್’ಗೆ ಆಹ್ವಾನಿಸಿದರು. ಗ್ಲಾಡಿಯೇಟರ್ಸ್ ತಂಡ ನಿಗದಿತ 10 ಓವರ್’ಗಳಲ್ಲಿ ಕೇವಲ 87 ರನ್ ಗಳಿಸಲಷ್ಟೇ ಶಕ್ತವಾಯಿತು. ಗುರಿ ಬೆನ್ನತ್ತಿದ ಮರಾಠ ಅರೇಬಿಯನ್ಸ್ ತಂಡ ಚಾಡ್ವಿಕ್ ವಾಲ್ಟನ್ ಸ್ಫೋಟಕ[26 ಎಸೆತಗಳಲ್ಲಿ 51 ರನ್] ಬ್ಯಾಟಿಂಗ್ ನೆರವಿನಿಂದ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. 

ಪ್ರಿಂಟೌಟ್ ಇಲ್ಲದ ಕಾರಣ ಪಂದ್ಯ ರದ್ದು; ಕ್ರಿಕೆಟ್ ಇತಿಹಾಸದಲ್ಲೇ ಮೊದಲು!

ಚಾಂಪಿಯನ್ ಪಟ್ಟ ಅಲಂಕರಿಸಿರುವುದು ನಿಜಕ್ಕೂ ಅದ್ಭುತ ಕ್ಷಣವಾಗಿದೆ. ಬಲಿಷ್ಠ ಎರಡು ತಂಡಗಳು ಫೈನಲ್’ನಲ್ಲಿ ಮುಖಾಮುಖಿಯಾಗಿದ್ದವು. ಇದು ನನಗೆ ಅದ್ಭುತ ಅನುಭವವಾಗಿದೆ. ನಾನು ಮುಂದಿನ ವರ್ಷವೂ ಟಿ10 ಲೀಗ್ ಆಡಲು ಎದುರು ನೋಡುತ್ತಿದ್ದೇನೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.  
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?