
ಕೊಲೊಂಬೊ(ಜು.26): ಸೌರವ್ ಗಂಗೂಲಿ ಅಭಿಮಾನಿಗಳಿಗೆ, ತಂಡದ ಸಹ ಆಟಾಗರರಿಗೆ ಕೇವಲ ಕ್ರಿಕೆಟಿಗ ಮಾತ್ರವಲ್ಲ, ಅತ್ಯುತ್ತಮ ನಾಯಕ. ಕ್ರಿಕೆಟ್ ಬಳಿಕ ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಗಂಗೂಲಿ ಅತ್ಯುತ್ತಮ ಆಡಳಿತ ನೀಡುತ್ತಿದೆ. ನಾಯಕತ್ವದ ಗುಣಗಳಿರುವ ಗಂಗೂಲಿಗೆ ಇದೀಗ ಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಅಗತ್ಯವಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಇದೀಗ ಶ್ರೀಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಕೂಡ ದಾದಾ, ಐಸಿಸಿ ಅಧ್ಯಕ್ಷರಾಗಲು ಸೂಕ್ತ ಎಂದಿದ್ದಾರೆ.
3 ತಿಂಗಳಲ್ಲಿ ಟೈಂ ಸಿಕ್ಕರೆ ಸಾಕು ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡ್ತೇನೆ: ದಾದಾ.
ದಾದಾ ಅತೀ ದೊಡ್ಡ ಅಭಿಮಾನಿಯಾಗಿರುವ ನಾನು ಅವರನ್ನು ಐಸಿಸಿ ಅಧ್ಯಕ್ಷರಾಗಿ ನೋಡಬಯಸುತ್ತೇನೆ. ಟೀಂ ಇಂಡಿಯಾದ ನಾಯಕನಾಗಿ ಮಹತ್ತರ ಬದಲಾವಣೆ ತಂಡ ಸೌರವ್ ಗಂಗೂಲಿ, ಇದೀಗ ಬಿಸಿಸಿಐ ಅಧ್ಯಕ್ಷರಾಗಿ ಅಷ್ಟೇ ಉತ್ತಮ ಆಡಳಿತ ನೀಡುತ್ತಿದ್ದಾರೆ. ಗಂಗೂಲಿ ಐಸಿಸಿ ಅಧ್ಯಕ್ಷರಾದರೆ ಮಹತ್ತರ ಬದಲಾವಣೆ ಸಾಧ್ಯ ಎಂದು ಸಂಗಕ್ಕಾರ ಹೇಳಿದ್ದಾರೆ.
ಸೌರವ್ ಗಂಗೂಲಿ ಕೆಲಸ ಕಾರ್ಯಗಳನ್ನು ಹತ್ತಿರದಿಂದ ನೋಡಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬದಲಾವಣೆ ಇದ್ದರೆ ಅದು ಗಂಗೂಲಿಯಿಂದ ಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಐಸಿಸಿಗೆ ಸೌರವ್ ಗಂಗೂಲಿಯೇ ಸೂಕ್ತ ಎಂದು ಸಂಗಕ್ಕಾರ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.