
ನವದೆಹಲಿ(ಜೂ.16): ಭಾರತ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ತರಬೇತುದಾರ, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಕೋಚ್ ಆಗಿ ನೇಮಕಗೊಂಡ ರೋಚಕತೆ ಕಥೆಯನ್ನು ಬಹಿರಂಗಪಡಿಸಿದ್ದಾರೆ.
ಕೇವಲ 7 ನಿಮಿಷಗಳಲ್ಲಿ ಟೀಂ ಇಂಡಿಯಾದ ಕೋಚ್ ಆಗಿ ನೇಮಕಗೊಂಡೆ ಎಂದು ಕರ್ಸ್ಟನ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ‘ಕೋಚ್ ಆಗಿ ನನಗೆ ಅನುಭವವಿರಲಿಲ್ಲ. ಆಸಕ್ತಿಯೂ ಇರಲಿಲ್ಲ. ಆದರೆ ಸುನಿಲ್ ಗವಾಸ್ಕರ್ ಆಹ್ವಾನಿಸಿದರು ಎನ್ನುವ ಕಾರಣಕ್ಕೆ ಬಿಸಿಸಿಐ ನಡೆಸಿದ ಸಂದರ್ಶನಕ್ಕೆ ಹಾಜರಾದೆ. ಕೋಚ್ ಆಯ್ಕೆ ಸಮಿತಿಯಲ್ಲಿದ್ದ ರವಿ ಶಾಸ್ತ್ರಿ ಕೇಳಿದ ಪ್ರಶ್ನೆಗೆ 2-3 ನಿಮಿಷ ಉತ್ತರಿಸಿದೆ. ಮುಂದಿನ 3 ನಿಮಿಷಗಳಲ್ಲಿ ಬಿಸಿಸಿಐ ಕಾರ್ಯದರ್ಶಿ ನೇಮಕಾತಿ ಪತ್ರ ಕೈಗಿತ್ತರು’ ಎಂದು ಕರ್ಸ್ಟನ್ ಹೇಳಿಕೊಂಡಿದ್ದಾರೆ.
ಗ್ಯಾರಿ 2007ರಲ್ಲಿ ನಡೆದ ಕೋಚ್ ಸಂದರ್ಶನವನ್ನು ಮೆಲುಕು ಹಾಕಿದ್ದಾರೆ. ಗ್ಯಾರಿ ಕರ್ಸ್ಟನ್ ಕೋಚ್ ಆಗುವ ಮುನ್ನ ಗ್ರೇಗ್ ಚಾಪೆಲ್ ಟೀಂ ಇಂಡಿಯಾ ಕೋಚ್ ಆಗಿದ್ದರು. ಚಾಪೆಲ್ ಮಾರ್ಗದರ್ಶನದಡಿ ಟೀಂ ಇಂಡಿಯಾ ಅಂತಹ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ವೆಸ್ಟ್ ಇಂಡೀಸ್ನಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದು ತೀವ್ರ ಮುಖಭಂಗ ಅನುಭವಿಸಿತ್ತು. ಇಂತಹ ಕಠಿಣ ಸಂದರ್ಭದಲ್ಲಿ ಗ್ಯಾರಿ ಟೀಂ ಇಂಡಿಯಾ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದರು.
ಕೊರೋನಾ ಮುಕ್ತ ನ್ಯೂಜಿಲೆಂಡ್ನಲ್ಲಿ ಟಿ20 ವಿಶ್ವಕಪ್ ಟೂರ್ನಿ?
ಗ್ಯಾರಿ ಕರ್ಸ್ಟನ್ ಟೀಂ ಇಂಡಿಯಾದ ಹಿರಿ-ಕಿರಿಯ ಆಟಗಾರರಲ್ಲಿ ಸಮನ್ವಯತೆ ಕಾಪಾಡುವಲ್ಲಿ ಯಶಸ್ವಿಯಾದರು. ನಾಯಕರಾಗಿದ್ದ ಧೋನಿ ಹಾಗೂ ಕೋಚ್ ಗ್ಯಾರಿ ಬಲಿಷ್ಠ ತಂಡವನ್ನು ಕಟ್ಟುವಲ್ಲಿ ಯಶಸ್ವಿಯಾಯಿತು. 2009ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಪಟ್ಟ ಅಲಂಕರಿಸಿತು. ಇದರ ಜೊತೆಗೆ 2011ರಲ್ಲಿ ಭಾರತದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲೂ ಸಫಲವಾಯಿತು. ಇದರೊಂದಿಗೆ ಬರೋಬ್ಬರಿ 28 ವರ್ಷಗಳ ಏಕದಿನ ವಿಶ್ವಕಪ್ ಬರವನ್ನು ಭಾರತ ನೀಗಿಸಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.