
ನವದೆಹಲಿ(ಅ.14): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಡುವೆ ಹಲವು ವಾರ್ಗಳು ನಡೆದಿದೆ. 2013ರ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಹಾಗೂ ಗಂಭೀರ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದಾದ ಬಳಿಕ ಕೊಹ್ಲಿಯನ್ನು ಟೀಕಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಹೊಗಳಿದ್ದಾರೆ.
ಇದನ್ನೂ ಓದಿ: ಕೊಹ್ಲಿಗೆ ತಾಕತ್ತಿದ್ರೆ IPL ಕಪ್ ಗೆಲ್ಲಲಿ: ಗಂಭೀರ್ ಖಡಕ್ ಸವಾಲು..!
ಸೌತ್ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯ ಗೆಲ್ಲೋ ಮೂಲಕ ಸರಣಿ ವಶಪಡಿಸಿಕೊಂಡ ಕೊಹ್ಲಿ ಸೈನ್ಯಕ್ಕೆ ಗಂಭೀರ್ ಅಭಿನಂದನೆ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲ, ನಾಯಕ ವಿರಾಟ್ ಕೊಹ್ಲಿ ಭಾರತ ಕಂಡ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ. ಜೊತೆಗೆ ಎಂ.ಎಸ್.ಧೋನಿ ಹಾಗೂ ಸೌರವ್ ಗಂಗೂಲಿಗಿಂತ ಕೊಹ್ಲಿಯೇ ಶ್ರೇಷ್ಠ ಎಂದಿದ್ದಾರೆ.
ಇದನ್ನೂ ಓದಿ: ಕೊಹ್ಲಿ ನಾಯಕತ್ವ ಪ್ರಶ್ನಿಸಿದ ಗಂಭೀರ್ ವಿರುದ್ಧ ಫ್ಯಾನ್ಸ್ ಗರಂ!
ಯುವ ವೇಗಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಕೊಹ್ಲಿಯ ರಣತಂತ್ರಗಳು ಉತ್ತಮವಾಗಿ ವರ್ಕೌಟ್ ಆಗಿದೆ. ವಿದೇಶಿ ಪಿಚ್ಗಳಲ್ಲೂ ಭಾರತ ಗೆಲುವಿನ ನಗೆ ಕಾಣುತ್ತಿದೆ. ಇದಕ್ಕೆ ಕೊಹ್ಲಿ ನಾಯಕತ್ವವೂ ಕಾರಣ ಎಂದು ಗಂಭೀರ್ ಹೇಳಿದ್ದಾರೆ.
ಇದನ್ನೂ ಓದಿ: RCB ತಂಡಕ್ಕೆ ಕೊಹ್ಲಿ ಕೃತಜ್ಞರಾಗಿರಬೇಕು: ಗಂಭೀರ್ ಕೊಂಕು ನುಡಿ
ಸೋಲುವ ಭಯವಿದ್ದರೆ ಗೆಲುವು ಸಾಧ್ಯವಿಲ್ಲ. ನಾಯಕ ವಿರಾಟ್ ಕೊಹ್ಲಿಗೆ ಸೋಲಿನ ಭಯವಿಲ್ಲ. ಪ್ರಯೋಗ ಮಾಡುವಾಗಲೂ ಪ್ರದರ್ಶನ ಮಾತ್ರ ಗಮನಹರಿಸುತ್ತಾರೆ ಹೊರತು, ಸೋಲು ಗೆಲುವಿನ ಲೆಕ್ಕಾಚಾರವಲ್ಲ. ಕೊಹ್ಲಿ ಇತರ ನಾಯಕರಿಗಿಂತ ಹೆಚ್ಚಿನ ರಿಸ್ಕ್ ತೆಗೆದುಕೊಂಡಿದ್ದಾರೆ. ಇದು ಕೊಹ್ಲಿ ಯಶಸ್ಸಿಗೆ ಕಾರಣ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.