ಪ್ರಾಕ್ಟೀಸ್‌ ಆಯ್ಕೆಯಲ್ಲ, ಕಡ್ಡಾಯ: 2 ಸೋಲಿನ ಬಳಿಕ ಭಾರತ ಆಟಗಾರರಿಗೆ ಬಿಸಿಸಿಐ ಖಡಕ್‌ ಸೂಚನೆ

Published : Oct 28, 2024, 12:36 PM IST
ಪ್ರಾಕ್ಟೀಸ್‌ ಆಯ್ಕೆಯಲ್ಲ, ಕಡ್ಡಾಯ: 2 ಸೋಲಿನ ಬಳಿಕ ಭಾರತ ಆಟಗಾರರಿಗೆ ಬಿಸಿಸಿಐ ಖಡಕ್‌ ಸೂಚನೆ

ಸಾರಾಂಶ

ತವರಿನಲ್ಲಿ 12 ವರ್ಷಗಳ ಬಳಿಕ ಟೆಸ್ಟ್ ಸರಣಿ ಸೋತು ಮುಖಭಂಗಕ್ಕೀಡಾಗಿರುವ ಟೀಂ ಇಂಡಿಯಾ ಆಟಗಾರರಿಗೆ ಇದೀಗ ಬಿಸಿಸಿಐ ಖಡಕ್ ವಾರ್ನಿಂಗ್ ಕೊಟ್ಟಿದೆ

ಮುಂಬೈ: ನ್ಯೂಜಿಲೆಂಡ್‌ ವಿರುದ್ಧ ಮೊದಲೆರಡು ಟೆಸ್ಟ್‌ ಪಂದ್ಯಗಳ ಸೋಲಿನ ಬಿಸಿ ಭಾರತೀಯ ಆಟಗಾರರಿಗೆ ತಟ್ಟಿದೆ. ಕೊನೆ ಪಂದ್ಯಕ್ಕೂ ಮುನ್ನ ಕಡ್ಡಾಯವಾಗಿ ಅಭ್ಯಾಸ ನಡೆಸುವಂತೆ ಆಟಗಾರರಿಗೆ ಬಿಸಿಸಿಐ ಸ್ಪಷ್ಟ ನಿರ್ದೇಶನ ನೀಡಿದೆ.

ಭಾರತೀಯ ಆಟಗಾರರಿಗೆ ಕೆಲ ಪಂದ್ಯಗಳಿಗೂ ಮುನ್ನ ಅಭ್ಯಾಸ ಶಿಬಿರದ ಆಯ್ಕೆ ಇರುತ್ತದೆ. ಅಂದರೆ ಯಾವುದೇ ಆಟಗಾರನಿಗೂ ಶಿಬಿರಕ್ಕೆ ಹಾಜರಾಗದೆ ಇರಬಹುದು. ಆದರೆ ನ.1ರಿಂದ ಆರಂಭಗೊಳ್ಳಲಿರುವ ಮುಂಬೈ ಟೆಸ್ಟ್‌ಗೂ ಮುನ್ನ ಆಟಗಾರರಿಗೆ ಅಭ್ಯಾಸ ಆಯ್ಕೆ ಅಲ್ಲ, ಕಡ್ಡಾಯ ಎಂದು ಬಿಸಿಸಿಐ ತಿಳಿಸಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

‘ಎಲ್ಲಾ ಆಟಗಾರರು ಅ.30 ಹಾಗೂ 31ರಂದು ಮುಂಬೈ ಕ್ರೀಡಾಂಗಣದಲ್ಲಿ ಅಭ್ಯಾಸ ಶಿಬಿರಕ್ಕೆ ಹಾಜರಾಗಬೇಕು. ಇದು ಕಡ್ಡಾಯ ಶಿಬಿರವಾಗಿದ್ದು, ಯಾರೂ ತಪ್ಪಿಸುವಂತಿಲ್ಲ’ ಎಂದು ತಂಡದ ಆಡಳಿತ ಆಟಗಾರರಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.

ಭಾರತ ಮೊದಲ ಪಂದ್ಯದಲ್ಲಿ ಕಿವೀಸ್‌ನ ವೇಗದ ಬೌಲರ್‌ಗಳ ಮುಂದೆ ಮಂಕಾಗಿದ್ದರೆ, 2ನೇ ಪಂದ್ಯದಲ್ಲಿ ತಾನೇ ತೋಡಿದ್ದ ಸ್ಪಿನ್ ಖೆಡ್ಡಾಕ್ಕೆ ಬಿದ್ದಿತ್ತು. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಸೇರಿದಂತೆ ಬಹುತೇಕ ಎಲ್ಲಾ ಬ್ಯಾಟರ್‌ಗಳು ಅಸ್ಥಿರ ಆಟವಾಡುತ್ತಿದ್ದು, ಕೊನೆ ಟೆಸ್ಟ್‌ನಲ್ಲಾದರೂ ದೊಡ್ಡ ಇನ್ನಿಂಗ್ಸ್‌ ಕಟ್ಟಬೇಕಾದ ಒತ್ತಡದಲ್ಲಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಲಾಮ್ ಲೇಥಮ್ ನೇತೃತ್ವದ ನ್ಯೂಜಿಲೆಂಡ್ ತಂಡವು 2-0 ಅಂತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 8 ವಿಕೆಟ್ ಅಂತರದ ಜಯ ಸಾಧಿಸಿತ್ತು. ಇದಾದ ಬಳಿಕ ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ತಂಡವು 113 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ನ್ಯೂಜಿಲೆಂಡ್ ತಂಡವು ಯಶಸ್ವಿಯಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ