ಭಾರತದ ಮಾಜಿ ನಾಯಕ ಕಪಿಲ್ ದೇವ್ ಕಿಡ್ನಾಪ್, ಗಂಭೀರ್ ಹಂಚಿದ ವಿಡಿಯೋ ಅಸಲಿಯತ್ತೇನು?

Published : Sep 25, 2023, 06:37 PM ISTUpdated : Sep 25, 2023, 06:38 PM IST
ಭಾರತದ ಮಾಜಿ ನಾಯಕ ಕಪಿಲ್ ದೇವ್ ಕಿಡ್ನಾಪ್, ಗಂಭೀರ್ ಹಂಚಿದ ವಿಡಿಯೋ ಅಸಲಿಯತ್ತೇನು?

ಸಾರಾಂಶ

ಟೀಂ ಇಂಡಿಯಾಗೆ ಮೊದಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಕಪಿಲ್ ದೇವ್ ಅಪಹರಣವಾಗಿದೆಯಾ? ಸಾಮಾಜಿಕ ಮಾಧ್ಯಮಗಳಲ್ಲಿ ಕಪಿಲ್ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದ ಅಸಲಿಯತ್ತೇನು?  

ನವದೆಹಲಿ(ಸೆ.25) ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋ ಹಲವು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ, ಭಾರತಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಕಪಿಲ್ ದೇವ್ ಅವರ ಅಪಹರಣವಾಗಿದೆಯಾ? ಅನ್ನೋ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಪಿಲ್ ದೇವ್ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಇದಾಗಿದೆ. ಈ ವಿಡಿಯೋ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ , ಆತಂಕ ಹೊರಹಾಕಿದ್ದಾರೆ. ಇದು ಕಪಿಲ್ ಪಾಜಿ ಅಲ್ಲಾ ಎಂದು ಭಾವಿಸುವೆ, ಇಷ್ಟೇ ಅಲ್ಲ ಕಪಿಲ್ ಚೆನ್ನಾಗಿದ್ದಾರೆ ಎಂದುಕೊಂಡಿದ್ದೇನೆ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ. 

ಈ ಕಿಡ್ನಾಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ವಿಡಿಯೋದಲ್ಲಿರುವುದು ಕಪಿಲ್ ದೇವ್ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ಇದು ಚಿತ್ರೀಕರಣ ಒಂದು ತುಣುಕು. ಕಪಿಲ್ ದೇವ್ ಅವರನ್ನು ಅಪಹರಣ ಮಾಡುತ್ತಿರುವ ದೃಶ್ಯ ಇದಾಗಿದೆ. ಚಿತ್ರ ಅಥವಾ ಜಾಹೀರಾತಿಗಾಗಿ ಈ ವಿಡಿಯೋ ಶೂಟ್ ಮಾಡಲಾಗಿದೆ. ಆದರೆ ಈ ಸಣ್ಣ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

'ಎಂತ ಹೊಡೆತ..!': ಗಿಲ್ ಬ್ಯಾಟಿಂಗ್‌ಗೆ ತೆಂಡುಲ್ಕರ್ ಪುತ್ರಿ ಸಾರಾ ದಿಲ್ ಖುಷ್..!

ಈ ವಿಡಿಯೋದಲ್ಲಿ ಇಬ್ಬರು ಕಪಿಲ್ ದೇವ್ ಅವರ ಕೈಗಳನ್ನು ಹಿಂಭಾಗಕ್ಕೆ ಕಟ್ಟಿದ್ದಾರೆ. ದಾರದಿಂದ ಕೈಗಳನ್ನು ಬಿಗಿಯಾಗಿ ಕಟ್ಟಲಾಗಿದೆ. ಇನ್ನು ಕಪಿಲ್ ದೇವ್ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಲಾಗಿದೆ. ಬಳಿಕ ಇಬ್ಬರು ಕಪಿಲ್ ದೇವ್ ಅವರನ್ನು ಎಳೆದುಕೊಂಡು ಸಾಗುತ್ತಿರುವ ದೃಶ್ಯವಿದೆ. ಈ ವೇಳೆ ಕಪಿಲ್ ದೇವ್ ಸಹಾಯಕ್ಕಾಗಿ ಹಿಂತಿರುಗಿ ನೋಡುವ ದೃಶ್ಯವೂ ಇದೆ.

 

 

ಈ ಅಪಹರಣ ದೃಶ್ಯವನ್ನು ಚಿತ್ರ ತಂಡ ಅಥವಾ ಜಾಹೀರಾತು ತಂಡ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿರುವ ಸಾಧ್ಯತೆ ಇದೆ. ಕಪಿಲ್ ಅಪಹರಣ ಕುರಿತು ಭಾರಿ ಪ್ರಚಾರ ಪಡೆಯಲು ಈ ರೀತಿ ಮಾಡಿರುವ ಸಾಧ್ಯತೆ ಹೆಚ್ಚು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಹಾಗೂ ಭಿನ್ನ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತದೆ. ಇದರ ಭಾಗವಾಗಿ ಈ ಕಸರತ್ತು ನಡೆಸಿರುವ ಸಾಧ್ಯತೆ ಇದೆ.

Asian Games 2023: ಚೀನಾದಲ್ಲಿ ಲಂಕಾ ದಹನ, ಚಿನ್ನ ಗೆದ್ದು ಬೀಗಿದ ಮಹಿಳಾ ಟೀಂ ಇಂಡಿಯಾ

ಗೌತಮ್ ಗಂಭೀರ್ ಈ ವಿಡಿಯೋ ಹಂಚಿಕೊಂಡು, ಬೇರೆ ಯಾರಿಗಾದರೂ ಈ ವಿಡಿಯೋ ಸಿಕ್ಕಿದೆಯಾ? ಇದು ಕಪಿಲ್ ಪಾಜಿ ಎಲ್ಲ ಎಂದು ಭಾವಿಸುತ್ತೇನೆ. ಅವರು ಚೆನ್ನಾಗಿದ್ದಾರೆ ಎಂದುಕೊಂಡಿದ್ದೇನೆ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ