
ಅಹಮದಾಬಾದ್(ಮಾ.17): ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಆತಿಥೇಯ ಭಾರತ ತಂಡ 8 ವಿಕೆಟ್ಗಳ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮೇಲೆ ಟೀಕೆಯ ಸುರಿಮಳೆಯೇ ಬರಲಾರಂಭಿಸಿದೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಹಾಲಿ ಸಂಸದ ಗೌತಮ್ ಗಂಭೀರ್, ಮೂರನೇ ಟಿ20 ಪಂದ್ಯದಿಂದ ಸೂರ್ಯಕುಮಾರ್ ಯಾದವ್ರನ್ನು ತಂಡದಿಂದ ಹೊರಬಿಟ್ಟಿದ್ದಕ್ಕೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಾಕಷ್ಟು ಕಾಯುವಿಕೆಯ ಬಳಿಕ ಇಂಗ್ಲೆಂಡ್ ವಿರುದ್ದದ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಇಶನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ಗಳ ಜಯ ದಾಖಲಿಸಿತ್ತು. ಹೀಗಾಗಿ ಸೂರ್ಯಕುಮಾರ್ ಯಾದವ್ಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ.
ಟೀಂ ಇಂಡಿಯಾಗೆ ಶಾಕ್; 3ನೇ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಸೈನ್ಯ!
ಒಂದು ವೇಳೆ ಗಾಯದ ಸಮಸ್ಯೆ ಎದುರಾಯಿತು ಎಂದಿಟ್ಟುಕೊಳ್ಳಿ. ಆಗ ಸೂರ್ಯಕುಮಾರ್ ಯಾದವ್ ಅವರಿಂದ ಏನನ್ನು ನಿರೀಕ್ಷಿಸುತ್ತೀರಿ. ಯಾರೂ ಗಾಯಕ್ಕೆ ತುತ್ತಾಗದಿರಲಿ ಎಂದು ನಾನು ಆಶಿಸುತ್ತೇನೆ. ಆದರೆ ಒಂದು ವೇಳೆ ಯಾರಾದರೂ ಗಾಯಕ್ಕೆ ತುತ್ತಾಗಿ ನಾಲ್ಕು ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಪರಿಸ್ಥಿತಿ ಬಂದರೆ ಯಾರನ್ನು ಕಣಕ್ಕಿಳಿಸುತ್ತೀರಾ?. ಶ್ರೇಯಸ್ ಅಯ್ಯರ್ಗೆ ಪರ್ಯಾಯವಾಗಿ ಯಾರಿಗೆ ಅವಕಾಶ ನೀಡುತ್ತೀರಾ ಎಂದು ಟೀಂ ಇಂಡಿಯಾ ಆಡಳಿತ ಮಂಡಳಿಯನ್ನು ಗೌತಿ ಪ್ರಶ್ನಿಸಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ಗೆ ಸರಿಯಾದ ಅವಕಾಶ ನೀಡದೇ ಬೆಂಚ್ ಕಾಯಿಸುವಂತೆ ಮಾಡಿದ್ದು ಅತ್ಯಂತ ಕಠಿಣ ನಿರ್ಧಾರ ಎಂದು ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.