
ನವದೆಹಲಿ(ನ.26): ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ(ಫಿರೋಜ್ ಷಾ ಕೋಟ್ಲಾ) ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಸ್ಟ್ಯಾಂಡ್ ಅನಾವರಣ ಮಾಡಲಾಗಿದೆ. ಸ್ಟ್ಯಾಂಡ್ ಅನಾವರಣ ಸಮಾರಂಭದಲ್ಲಿ ಸ್ವತಃ ಗಂಭೀರ್ ಕೂಡ ಹಾಜರಿದ್ದರು. ಇದು ನನ್ನ ಪಾಲಿನ ಶ್ರೇಷ್ಠ ದಿನ ಎಂದು ಗಂಭೀರ್ ಬಣ್ಣಿಸಿದರು.
ಇದನ್ನೂ ಓದಿ: ಕೊಹ್ಲಿ ಸಾಧನೆಗೆ ಮತ್ತೊಂದು ಗರಿ; ಕೋಟ್ಲಾ ಮೈದಾನದಲ್ಲಿ ಕೊಹ್ಲಿ ಹೆಸರು..!.
ದೆಹಲಿ ಕ್ರಿಕೆಟಿಗ ಗೌತಮ್ ಗಂಭೀರ್, ಭಾರತ ಕಂಡ ಅತ್ಯುತ್ತಮ ಆರಂಭಿಕ ಬ್ಯಾಟ್ಸ್ಮನ್. 2011ರ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದಲ್ಲಿ 97 ರನ್ ಸಿಡಿಸಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಇದೀಗ ಗಂಭೀರ್ ಕೊಡುಗೆ ಪರಿಗಣಿಸಿ ಜೇಟ್ಲಿ ಕ್ರೀಡಾಂಗಣದಲ್ಲಿನ ಒಂದು ಸ್ಟ್ಯಾಂಡ್ಗೆ ಗಂಭೀರ್ ಹೆಸರಿಡಲಾಗಿದೆ.
ಇದನ್ನೂ ಓದಿ: ಧೋನಿ ಪೆವಿಲಿಯನ್ ಉದ್ಘಾಟಿಸಲು ನಿರಾಕರಿಸಿದ MSD!
ಅರುಣ್ ಜೇಟ್ಲಿ ನನಗೆ ತಂದೆಯ ಸಮಾನ. ಇದೀಗ ಅವರ ಕ್ರೀಡಾಂಗಣದಲ್ಲಿ ನನ್ನ ಸ್ಟ್ಯಾಂಡ್ ಅನಾವರಣ ಮಾಡಿರುವುದು ನನ್ನ ಹೆಮ್ಮೆ ಹಾಗೂ ಅಭಿಮಾನ. ದೆಹಲಿ ಕ್ರೆಕೆಟ್ ಸಂಸ್ಥೆಯ ಎಲ್ಲರಿಗೂ, ನನ್ನ ಅಭಿಮಾನಿಗಳು ಹಾಗೂ ಕುಂಟುಂಬದವರಿಗೆ ಧನ್ಯವಾದ ಎಂದು ಗಂಭೀರ್ ಹೇಳಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ಜೇಟ್ಲಿ ಕ್ರೀಡಾಂಗಣದ ಸ್ಟಾಂಡ್ಗೆ ವಿರಾಟ್ ಕೊಹ್ಲಿ ಸ್ಟ್ಯಾಂಡ್ ಎಂದು ನಾಮಕರಣ ಮಾಡಲಾಗಿತ್ತು. ಇದೀಗ ಗಂಭೀರ್ ಸ್ಟ್ಯಾಂಡ್ ಎಂದು ಹೆಸರಿಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.