ಕರ್ನಾಟಕದ ಐಪಿಎಲ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌..?

Suvarna News   | Asianet News
Published : Feb 27, 2021, 11:17 AM IST
ಕರ್ನಾಟಕದ ಐಪಿಎಲ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌..?

ಸಾರಾಂಶ

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಕೆಲವು ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.  ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಫೆ.27): 2021ರ ಐಪಿಎಲ್‌ ಟಿ20 ಟೂರ್ನಿಗೆ ಇನ್ನು ಕೇವಲ ಒಂದೂವರೆ ತಿಂಗಳು ಮಾತ್ರ ಬಾಕಿ ಇದ್ದು, ಲೀಗ್‌ ಹಂತದ ಪಂದ್ಯಗಳನ್ನು ಬೆಂಗಳೂರು ಸೇರಿ 4-5 ನಗರಗಳಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಫೈನಲ್‌ ಸೇರಿ ಪ್ಲೇ-ಆಫ್‌ ಹಂತದ ಎಲ್ಲಾ ಪಂದ್ಯಗಳಿಗೆ ಅಹಮದಾಬಾದ್‌ ಆತಿಥ್ಯ ವಹಿಸುವುದು ಬಹುತೇಕ ಖಚಿತ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಮೊದಲು ಮುಂಬೈನ 4 ಹಾಗೂ ಪುಣೆ ಕ್ರೀಡಾಂಗಣದಲ್ಲಿ ಲೀಗ್‌ ಹಂತವನ್ನು ನಡೆಸಲು ಬಿಸಿಸಿಐ ಯೋಜನೆ ರೂಪಿಸಿತ್ತು. ಆದರೆ ಕಳೆದ ಕೆಲ ದಿನಗಳಿಂದ ಮುಂಬೈ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪರ್ಯಾಯ ಮಾರ್ಗ ಹುಡುಕುತ್ತಿದೆ.

ಟಿ20 ವಿಶ್ವಕಪ್‌ಗೆ ವೀಸಾ ಕೊಡಿ, ಇಲ್ಲವೇ ಭಾರತದಿಂದ ವಿಶ್ವಕಪ್‌ ಎತ್ತಂಗಡಿ ಮಾಡಿ: ಪಾಕ್‌ ಎಚ್ಚರಿಕೆ

ಮುಷ್ತಾಕ್‌ ಅಲಿ ಟಿ20, ಇಂಗ್ಲೆಂಡ್‌ ವಿರುದ್ಧದ ಸರಣಿ, ವಿಜಯ್‌ ಹಜಾರೆ ಏಕದಿನ ಟೂರ್ನಿ, ಮಹಿಳಾ ರಾಷ್ಟ್ರೀಯ ಏಕದಿನ ಟೂರ್ನಿ ಸೇರಿದಂತೆ ದೇಸಿ ಟೂರ್ನಿಗಳನ್ನು ಯಶಸ್ವಿಯಾಗಿ ಬಯೋ ಬಬಲ್‌ನಲ್ಲಿ ನಡೆಸುತ್ತಿರುವ ಬಿಸಿಸಿಐ, ಐಪಿಎಲ್‌ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುವ ಆಯ್ಕೆಯನ್ನು ಕೈಬಿಟ್ಟಿದೆ ಎಂದು ಮೂಲಗಳು ತಿಳಿಸಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!