"ಓರ್ವ ನಾಲಾಯಕ್ ಮಾತ್ರ...": ಮತ್ತೊಮ್ಮೆ ಮಾಜಿ ಕ್ರಿಕೆಟಿಗನ ಮೇಲೆ ಬೆಂಕಿಯುಗುಳಿದ ಭಜ್ಜಿ..!

By Naveen KodaseFirst Published Jun 12, 2024, 5:09 PM IST
Highlights

ಈ ಪಂದ್ಯದ ಕೊನೆಯಲ್ಲಿ ARY ನ್ಯೂಸ್‌ನಲ್ಲಿ ಕ್ರಿಕೆಟ್‌ ವಿಶ್ಲೇಷಕರಾಗಿ ಪಾಲ್ಗೊಂಡಿದ್ದ ಅಕ್ಮಲ್, ಕೊನೆಯ ಓವರ್‌ನಲ್ಲಿ ಪಾಕಿಸ್ತಾನ ತಂಡವು ಗೆಲ್ಲಲು 18 ರನ್ ಅಗತ್ಯವಿತ್ತು. ಈ ಸಂದರ್ಭದಲ್ಲಿ ಮಾತನಾಡಿದ್ದ ಅಕ್ಮಲ್, "ನೋಡಿ ಏನು ಬೇಕಾದರೂ ಆಗಬಹುದು. ಕೊನೆಯ ಓವರ್ ಆರ್ಶದೀಪ್ ಬೌಲಿಂಗ್ ಮಾಡಬೇಕಾಗುತ್ತದೆ. ಅವರೇನು ಉತ್ತಮ ಲಯದಲ್ಲಿ ಇದ್ದಂತೆ ಕಾಣುತ್ತಿಲ್ಲ. ಅದರಲ್ಲೂ ಬೇರೆ ಈಗ ಸಮಯ 12ರ ಗಡಿ ದಾಟಿದೆ ಎಂದು ಹೇಳಿ ನಗೆಯಾಡಿದ್ದಾರೆ". ಅಂದರೆ 12 ಗಂಟೆಯ ನಂತರ ಸಿಖ್‌ರೇನು ಮಾಡುತ್ತಾರೆ ಎಂಬರ್ಥದಲ್ಲಿ ಕಮ್ರಾನ್ ಅಕ್ಮಲ್ ವ್ಯಂಗ್ಯವಾಡಿದ್ದರು.

ನ್ಯೂಯಾರ್ಕ್‌: ಟೀಂ ಇಂಡಿಯಾ ವೇಗಿ ಆರ್ಶದೀಪ್ ಸಿಂಗ್ ಕುರಿತಾಗಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಅವರ ಜನಾಂಗೀಯ ನಿಂದನೆಯ ಕುರಿತಂತೆ ಮತ್ತೊಮ್ಮೆ ಹರ್ಭಜನ್ ಸಿಂಗ್ ಗುಡುಗಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ಆರ್ಶದೀಪ್ ಸಿಂಗ್ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಸಿಖ್‌ ಜನಾಂಗದ ಕುರಿತಂತೆ ಲೇವಡಿ ಮಾಡಿದ್ದಾರು. ಇದು ವಿವಾದಕ್ಕೆ ಈಡಾಗುತ್ತಿದ್ದಂತೆಯೇ ಕಮ್ರಾನ್ ಅಕ್ಮಲ್ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದರು.

ಅಷ್ಟಕ್ಕೂ ಆಗಿದ್ದೇನು?

Latest Videos

ಕಳೆದ ಭಾನುವಾರ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ನ್ಯೂಯಾರ್ಕ್‌ನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು. ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದರಿಂದ ಈ ಪಂದ್ಯವು ತಡರಾತ್ರಿಯವರೆಗೂ ಸಾಗಿತು. ಭಾರತ ನೀಡಿದ್ದ 120 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ್ದ ಪಾಕಿಸ್ತಾನ ತಂಡವು ಗೆಲುವಿನತ್ತ ದಾಪುಗಾಲು ಹಾಕಿತಾದರೂ, ಕೊನೆಯಲ್ಲಿ ಭಾರತ ಮಿಂಚಿನ ದಾಳಿ ನಡೆಸಿ 6 ರನ್ ಅಂತರದಲ್ಲಿ ಗೆಲುವು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. 

ಯುಎಸ್‌ಎ ಎದುರಿನ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ; ಕೊನೆಗೂ ಒಂದು ಬದಲಾವಣೆಗೆ ಮುಂದಾದ ರೋಹಿತ್ ಪಡೆ

ಈ ಪಂದ್ಯದ ಕೊನೆಯಲ್ಲಿ ARY ನ್ಯೂಸ್‌ನಲ್ಲಿ ಕ್ರಿಕೆಟ್‌ ವಿಶ್ಲೇಷಕರಾಗಿ ಪಾಲ್ಗೊಂಡಿದ್ದ ಅಕ್ಮಲ್, ಕೊನೆಯ ಓವರ್‌ನಲ್ಲಿ ಪಾಕಿಸ್ತಾನ ತಂಡವು ಗೆಲ್ಲಲು 18 ರನ್ ಅಗತ್ಯವಿತ್ತು. ಈ ಸಂದರ್ಭದಲ್ಲಿ ಮಾತನಾಡಿದ್ದ ಅಕ್ಮಲ್, "ನೋಡಿ ಏನು ಬೇಕಾದರೂ ಆಗಬಹುದು. ಕೊನೆಯ ಓವರ್ ಆರ್ಶದೀಪ್ ಬೌಲಿಂಗ್ ಮಾಡಬೇಕಾಗುತ್ತದೆ. ಅವರೇನು ಉತ್ತಮ ಲಯದಲ್ಲಿ ಇದ್ದಂತೆ ಕಾಣುತ್ತಿಲ್ಲ. ಅದರಲ್ಲೂ ಬೇರೆ ಈಗ ಸಮಯ 12ರ ಗಡಿ ದಾಟಿದೆ ಎಂದು ಹೇಳಿ ನಗೆಯಾಡಿದ್ದಾರೆ". ಅಂದರೆ 12 ಗಂಟೆಯ ನಂತರ ಸಿಖ್‌ರೇನು ಮಾಡುತ್ತಾರೆ ಎಂಬರ್ಥದಲ್ಲಿ ಕಮ್ರಾನ್ ಅಕ್ಮಲ್ ವ್ಯಂಗ್ಯವಾಡಿದ್ದರು.

Absolutely disgusting, hateful and deplorable statements by Pakistani specialists including former Pak cricketer Kamran Akmal covering match against Indian player Arshdeep Singh because he is Sikh. pic.twitter.com/1GFrIsImWT

— Megh Updates 🚨™ (@MeghUpdates)

ಕಮ್ರಾನ್ ಅಕ್ಮಲ್‌ ಅವರ ಈ ಲೇವಡಿ ಬೆಳಗಾಗುತ್ತಿದ್ದಂತೆಯೇ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ದೇಶ ವಿಭಜನೆಯ ಸಂದರ್ಭದಲ್ಲಿ ನಿಮ್ಮ ತಾಯಿ, ಸಹೋದರಿಯರನ್ನು ಉಳಿಸಿದ್ದು ಇದೇ ಸಿಖ್ಖರು ಎಂದು ಹೇಳಿದ್ದರು. 

Lakh di laanat tere Kamraan Akhmal.. You should know the history of sikhs before u open ur filthy mouth. We Sikhs saved ur mothers and sisters when they were abducted by invaders, the time invariably was 12 o’clock . Shame on you guys.. Have some Gratitude 😡😡🤬 https://t.co/5gim7hOb6f

— Harbhajan Turbanator (@harbhajan_singh)

ವಿವಾದ ದೊಡ್ಡದಾಗುತ್ತಿದ್ದಂತೆಯೇ ಕಮ್ರಾನ್ ಅಕ್ಮಲ್, ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. "ನನ್ನ ಇತ್ತೀಚಿನ ಹೇಳಿಕೆ ಕುರಿತಂತೆ ಸಿಖ್ ಸಮುದಾಯ ಹಾಗೂ ಹರ್ಭಜನ್ ಸಿಂಗ್ ಅವರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ. ನಾನು ಹೇಳಿದ ಮಾತು ಸರಿಯಾಗಿಲ್ಲ ಹಾಗೂ ಅವಮಾನಕಾರಿಯಾಗಿತ್ತು. ನನಗೆ ಸಿಖ್ ಸಮುದಾಯದ ಮೇಲೆ ತುಂಬಾ ಗೌರವವಿದೆ, ನನಗೆ ಯಾರನ್ನು ನೋಯಿಸುವ ಉದ್ದೇಶವಿರಲಿಲ್ಲ, ನಿಜಕ್ಕೂ ನಾನು ನಿಮ್ಮೆಲ್ಲರ ಕ್ಷಮೆ ಕೋರುತ್ತೇನೆ ಎಂದು ಕಮ್ರಾನ್ ಅಕ್ಮಲ್ ಹೇಳಿದ್ದರು.

| Brooklyn, New York: On former Pakistan cricketer Kamran Akmal's comment over the Sikh community, former Indian cricketer Harbhajan Singh says "This is a very absurd statement and a very childish act that only a 'Nalaayak' person can do. Kamran Akmal should understand… pic.twitter.com/SyCKW59fgf

— ANI (@ANI)

ಈ ಬಗ್ಗೆ ಮತ್ತೆ ತಿರುಗೇಟು ನೀಡಿರುವ ಹರ್ಭಜನ್ ಸಿಂಗ್, ಕಮ್ರಾನ್ ಅಕ್ಮಲ್ ಅವರ ಮಾತುಗಳು ಕೇಳುವುದಕ್ಕೆ ಬಾಲಿಷವಾಗಿವೆ. ನಾಲಾಯಕ್‌ಗಳು ಮಾತ್ರ ಹೀಗೆ ಹೇಳಲು ಸಾಧ್ಯ ಎಂದು ಭಜ್ಜಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಾಷೆಗೂ ಯಾರೂ ಯಾವ ಧರ್ಮದ ಬಗ್ಗೆ ಲೇವಡಿ ಮಾಡಬಾರದು ಎನ್ನುವ ಅರಿವು ಅಕ್ಮಲ್‌ಗೆ ಇರಬೇಕು ಎಂದು ಭಜ್ಜಿ ಗುಡುಗಿದ್ದಾರೆ.

click me!