ಮಣ್ಣಿನ ರುಚಿ ಹೇಗಿತ್ತು? ಟೀಂ ಇಂಡಿಯಾ ಜೊತೆ ಸಂವಾದದಲ್ಲಿ ರೋಹಿತ್‌ಗೆ ಮೋದಿ ಗೂಗ್ಲಿ!

Published : Jul 05, 2024, 10:39 AM ISTUpdated : Jul 05, 2024, 10:46 AM IST
ಮಣ್ಣಿನ ರುಚಿ ಹೇಗಿತ್ತು? ಟೀಂ ಇಂಡಿಯಾ ಜೊತೆ ಸಂವಾದದಲ್ಲಿ ರೋಹಿತ್‌ಗೆ ಮೋದಿ ಗೂಗ್ಲಿ!

ಸಾರಾಂಶ

ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗರನ್ನು ಸನ್ಮಾನಿಸಿದ ಮೋದಿ ಸಂವಾದ ನಡೆಸಿದ್ದಾರೆ. ಈ ವೇಳೆ ಮೋದಿ ಜೊತೆ ಕ್ರಿಕೆಟಿಗರು ಆತ್ಮೀಯವಾಗಿ ಮಾತನಾಡಿದ್ದಾರೆ. ಇದೇ ವೇಳೆ ಮಣ್ಣಿನ ರುಚಿ ಹೇಗಿತ್ತು ಎಂದು ಮೋದಿ ನಾಯಕ ರೋಹಿತ್ ಶರ್ಮಾ ಬಳಿ ಪ್ರಶ್ನಿಸಿದ್ದಾರೆ.

ನವದೆಹಲಿ(ಜು.05) ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾ ಕ್ರಿಕೆಟಿಗರನ್ನು ಸನ್ಮಾನಿಸಿ ಆಟಗಾರರ ಜೊತೆ ಸಂವಾದನ ನಡೆಸಿದ್ದಾರೆ. ಈ ವೇಳೆ ಮೋದಿ ನಾಯಕ ರೋಹಿತ್ ಸೇರಿದಂತೆ ಕ್ರಿಕೆಟಿಗರಲ್ಲಿ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ರೋಹಿತ್‌ಗೆ ಮಣ್ಣಿನ ರುಚಿ ಹೇಗಿತ್ತು ಎಂದು ಪ್ರಶ್ನಿಸಿದ್ದಾರೆ. ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ತವರಿಗೆ ಆಗಮಿಸಿದ ಟೀಂ ಇಂಡಿಯಾ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ತೆರಳಿತ್ತು. ಮೋದಿ ಜೊತೆ ಉಪಹಾರ ಸವಿದ ಆಟಗಾರರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೋಹಿತ್‌ಗೆ ಮೋದಿ ಕೇಳಿದ ಮಣ್ಣಿನ ರುಚಿ ಪ್ರಶ್ನಗೆ ಇಡೀ ತಂಡವೇ ಹಾಸ್ಯ ಚಟಾಕಿ ಸಿಡಿಸಿತ್ತು.

ಟಿ20 ವಿಶ್ವಕಪ್‌ ಟ್ರೋಫಿ ಗೆಲುವಿನ ಬಳಿಕ ಭಾರತದ ನಾಯಕ ರೋಹಿತ್‌ ಶರ್ಮಾ ಪಿಚ್‌ ಮೇಲಿನ ಮಣ್ಣು ತಿಂದು ಸಂಭ್ರಮಿಸಿದ್ದರು. 24 ಗ್ರ್ಯಾನ್‌ಸ್ಲಾಂ ಟೆನಿಸ್‌ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್‌ ಜೋಕೋವಿಚ್‌ 2011ರಲ್ಲಿ ವಿಂಬಲ್ಡನ್‌ ಗೆದ್ದ ಬಳಿಕ ಸಂಭ್ರಮಾಚರಣೆ ವೇಳೆ ಅಂಗಳದ ಮಣ್ಣು ತಿಂದಿದ್ದರು.ಇವರಿಬ್ಬರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಸಂಭ್ರಮ ಯಾತ್ರೆಯಲ್ಲಿ ಕೊಹ್ಲಿ ಟ್ರೋಫಿ ನೀಡುತ್ತಿದ್ದಂತೆ ಭಾವುಕರಾದ ರಿಷಬ್ ಪಂತ್!

ವಾಂಖೇಡೆಯಲ್ಲಿ ಸನ್ಮಾನ, ₹125 ಕೋಟಿ ಚೆಕ್‌ ಹಸ್ತಾಂತರ
ಬೃಹತ್‌ ಮೆರವಣಿಗೆ ಬಳಿಕ ಆಟಗಾರರು ವಾಂಖೇಡೆ ಕ್ರೀಡಾಂಗಣಕ್ಕೆ ಆಗಮಿಸಿದರು. ಮೈದಾನದುದ್ದಕ್ಕೂ ಆಟಗಾರರು ಟ್ರೋಫಿ ಹಿಡಿದು ಸಾಗುತ್ತಿದ್ದಂತೆಯೇ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತ್ತು. ಬಳಿಕ ಆಟಗಾರರಿಗೆ ಬಿಸಿಸಿಐ ವತಿಯಿಂದ ಸನ್ಮಾನ ಮಾಡಲಾಯಿತು. ವಿಶ್ವಕಪ್‌ ವಿಜೇತ ತಂಡಕ್ಕೆ ಬಿಸಿಸಿಐ ಘೋಷಿಸಿದ್ದ 125 ಕೋಟಿ ರು. ನಗದು ಬಹುಮಾನವನ್ನು ಇದೇ ವೇಳೆ ಹಸ್ತಾಂತರಿಸಲಾಯಿತು. ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ್‌ ಶಾ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಮಳೆ ನಡುವೆ ತುಂಬಿ ತುಳುಕಿದ ವಾಂಖೇಡೆ
ಭಾರತ ತಂಡದ ವಿಜಯೋತ್ಸವಕ್ಕೆ ಸಾಕ್ಷಿಯಾಗಲು ಅಪಾರ ಪ್ರಮಾಣದ ಅಭಿಮಾನಿಗಳು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದಿದ್ದರು. ಮಳೆ ಸುರಿಯುತ್ತಿದ್ದರೂ ಕ್ರೀಡಾಂಗಣ ಸಂಜೆ ವೇಳೆ ಅಭಿಮಾನಿಗಳಿಂದ ತುಂಬಿ ತುಳುಕಿತು. ಹೊರಗೆ ಭಾರಿ ಪ್ರಮಾಣದಲ್ಲಿ ಪ್ರೇಕ್ಷಕರು ಮೆರವಣಿಗೆ ವೀಕ್ಷಿಸುತ್ತಿದ್ದರೂ, ಕ್ರೀಡಾಂಗಣದಲ್ಲೂ ಜನಸಾಗರ ನೆರೆದಿತ್ತು. ಮೈದಾನ ಪ್ರವೇಶಿಸಲು ಹಲವು ಗಂಟೆಗಳ ಕಾಲ ಪ್ರೇಕ್ಷಕರು ಹೊರಗೆ ಕಾಯಬೇಕಾಯಿತು.

ಟೀಂ ಇಂಡಿಯಾ ವಿಜಯಿಯಾತ್ರೆಗೆ 3 ಲಕ್ಷಕ್ಕೂ ಅಧಿಕ ಫ್ಯಾನ್ಸ್ ಭಾಗಿ, ಹಲವರಿಗೆ ಗಾಯ!
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?