ನನಗೇನಾದರೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಬಂದಿದ್ದರೆ..? ಹೃದಯಗೆದ್ದ ವಿರಾಟ್ ಮಾತು

Web Desk   | Asianet News
Published : Nov 24, 2019, 03:31 PM IST
ನನಗೇನಾದರೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಬಂದಿದ್ದರೆ..? ಹೃದಯಗೆದ್ದ ವಿರಾಟ್ ಮಾತು

ಸಾರಾಂಶ

ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಅನಾಯಾಸವಾಗಿ ಗೆದ್ದುಕೊಂಡಿದೆ. ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಮುತ್ತಿನಂತ ಮಾತನಾಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಕೋಲ್ಕತಾ[ನ.24]: ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದೆ. ಟೀಂ ಇಂಡಿಯಾ ಸಂಘಟಿತ ಪ್ರದರ್ಶನಕ್ಕೆ ಮತ್ತೊಂದು ಇನಿಂಗ್ಸ್ ಟೆಸ್ಟ್ ಗೆಲುವು ಭಾರತದ ಪಾಲಾಗಿದೆ. ಈ ಟೆಸ್ಟ್ ಪಂದ್ಯವನ್ನು ಗೆಲ್ಲುವುದರ ಮೂಲಕ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್’ಶಿಪ್’ನಲ್ಲಿ ಒಟ್ಟು 360 ಅಂಕ ಗಳಿಸುವುದರೊಂದಿಗೆ ನಂ.1 ಸ್ಥಾನದಲ್ಲೇ ಮುಂದುವರೆದಿದೆ.

ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವು; ಕೊಹ್ಲಿ ಸೈನ್ಯಕ್ಕೆ ಫ್ಯಾನ್ಸ್ ಸಲ್ಯೂಟ್!

ಭಾರತದ ಕ್ರಿಕೆಟ್ ಕಾಶಿ ಎಂದೇ ಹೆಸರಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಚೊಚ್ಚಲ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್ ಅದ್ಭುತ ಪ್ರದರ್ಶನ ನೀಡುವುದರ ಮೂಲಕ ಕಮಾಲ್ ಮಾಡಿದರೆ, ನಾಯಕ ವಿರಾಟ್ ಕೊಹ್ಲಿ ಶತಕ ಬಾರಿಸಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡರು.

ಐತಿಹಾಸಿಕ ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ’ಕಳೆದ ಮೂರ್ನಾಲ್ಕು ವರ್ಷಗಳ ಕಠಿಣ ಪ್ರಯತ್ನದ ಫಲವಾಗಿ ಟೀಂ ಇಂಡಿಯಾ ಈಗ ಉತ್ತಮ ಪ್ರದರ್ಶನ ನೀಡುತ್ತಿದೆ. ನನಗೆ ಆಯೋಜಕರು ಒಂದು ವೇಳೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿದರೆ, ಅದನ್ನು ಉಮೇಶ್ ಅಥವಾ ಇಶಾಂತ್’ಗೆ ನೀಡುತ್ತಿದ್ದೆ’ ಎಂದಿದ್ದಾರೆ. ಕೊಹ್ಲಿಯ ಈ ಹೇಳಿಕೆ ಕ್ರಿಕೆಟ್ ಅಭಿಮಾನಿಗಳ ಹೃದಯಗೆದ್ದಿದೆ.

ಇಶಾಂತ್-ಉಮೇಶ್ ಬಿರುಗಾಳಿ, ಪಿಂಕ್ ಬಾಲ್ ಟೆಸ್ಟ್ ಟೀಂ ಇಂಡಿಯಾ ಕೈವಶ

ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ  79 ರನ್ ನೀಡಿ 9 ವಿಕೆಟ್ ಪಡೆದರೆ, ಮತ್ತೋರ್ವ ವೇಗಿ ಉಮೇಶ್ ಯಾದವ್ 82 ರನ್ ನೀಡಿ 8 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೀಂ ಇಂಡಿಯಾ ಇನಿಂಗ್ಸ್ ಗೆಲುವಿನಲ್ಲಿ ನೆರವಾಗಿದ್ದರು. 

ಭಾರತದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ನಾಯಕ ವಿರಾಟ್ ಕೊಹ್ಲಿ ಮೊದಲ ಶತಕ ಸಿಡಿಸಿದ್ದರು. ಹೀಗಾಗಿ ಎಲ್ಲರೂ ವಿರಾಟ್’ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಗಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಅದ್ಭುತ ಬೌಲಿಂಗ್ ಸಂಘಟಿಸಿದ್ದ ಇಶಾಂತ್ ಶರ್ಮಾಗೆ ಪಂದ್ಯಶ್ರೇಷ್ಠ ಹಾಗೆಯೇ ಸರಣಿ ಶ್ರೇಷ್ಠ ಗೌರವ ಒಲಿದು ಬಂದಿದೆ. 

ಭಾರತ ತಂಡವು ಇನ್ನು 2020ರ ಫೆಬ್ರವರಿ 21ರಂದು ವೆಲ್ಲಿಂಗ್ಟನ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡಲಿದೆ. ಅಲ್ಲಿಯವರೆಗೂ ಟೀಂ ಇಂಡಿಯಾ ಸೀಮಿತ ಓವರ್’ಗಳ ಪಂದ್ಯವನ್ನಷ್ಟೇ ಆಡಲಿದೆ. ಇದೀಗ ವಿರಾಟ್ ಪಡೆ ಡಿಸೆಂಬರ್ 06ರಿಂದ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆಡಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ