ಚಾಂಪಿಯನ್ಸ್ ಟ್ರೋಫಿ: ಭಾರತ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

Published : Feb 20, 2025, 02:07 PM ISTUpdated : Feb 20, 2025, 02:50 PM IST
ಚಾಂಪಿಯನ್ಸ್ ಟ್ರೋಫಿ: ಭಾರತ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

ಸಾರಾಂಶ

ದುಬೈನಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅಭಿಯಾನ ಆರಂಭವಾಗಿದೆ. ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. 2017ರ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿದ್ದ ಭಾರತ, ಈ ಬಾರಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಸಜ್ಜಾಗಿದೆ. 2017ರ ಸೆಮಿಫೈನಲ್‌ನಲ್ಲಿ ಭಾರತ ಬಾಂಗ್ಲಾವನ್ನು ಸೋಲಿಸಿತ್ತು.

ದುಬೈ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಂದು ಭಾರತದ ಅಭಿಯಾನ ಆರಂಭವಾಗಿದೆ. ಟೂರ್ನಿಯ ಎರಡನೇ ಪಂದ್ಯದಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೊಸೈನ್ ಶಾಂತೋ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ. ಬಾಂಗ್ಲಾದೇಶ ತಂಡವು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್ ಹಾಗೂ 6 ಬ್ಯಾಟರ್‌ಗಳೊಂದಿಗೆ ಕಣಕ್ಕಿಳಿದಿದೆ. ಇನ್ನೊಂದೆಡೆ ಭಾರತ ತಂಡವು ವೇಗದ ಬೌಲಿಂಗ್ ರೂಪದಲ್ಲಿ ಮೊಹಮ್ಮದ್ ಶಮಿ ಹಾಗೂ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಕೂಡಾ ಬ್ಯಾಟಿಂಗ್ ಆಲ್ರೌಂಡರ್ ಆಗಿ ಸ್ಥಾನ ಪಡೆದಿದ್ದಾರೆ.

2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಟೀಂ ಇಂಡಿಯಾ ನೆರೆಯ ಪಾಕಿಸ್ತಾನ ಎದುರು ಮುಗ್ಗರಿಸುವ ಮೂಲಕ ಮೂರನೇ ಬಾರಿಗೆ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇದೀಗ ಆ ನಿರಾಸೆಯನ್ನು ಮರೆತು, ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ. 

ದುಬೈನಲ್ಲಿಂದು ಮೆಗಾ ಫೈಟ್‌; ಬಾಂಗ್ಲಾದೇಶಕ್ಕೆ ಮಣ್ಣುಮುಕ್ಕಿಸಿ ಗೆಲ್ಲುತ್ತಾ ಭಾರತ?

ಇನ್ನೊಂದೆಡೆ ಭಾರತ-ಬಾಂಗ್ಲಾದೇಶ ಚಾಂಪಿಯನ್ಸ್‌ ಟ್ರೋಫಿ ಇತಿಹಾಸದಲ್ಲಿ ಒಮ್ಮೆ ಮುಖಾಮುಖಿಯಾಗಿದೆ. 2017ರ ಸೆಮಿಫೈನಲ್‌ನಲ್ಲಿ ಬಾಂಗ್ಲಾ ವಿರುದ್ಧ ಭಾರತ ಗೆದ್ದಿತ್ತು. ಭಾರತದ ಎದುರು ಸೇಡು ತೀರಿಸಿಕೊಳ್ಳಲು ಬಾಂಗ್ಲಾದೇಶ ಎದುರು ನೋಡುತ್ತಿದೆ.

ಉಭಯ ತಂಡಗಳ ಆಟಗಾರರು

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌, ಅಕ್ಷರ್‌ ಪಟೇಲ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.

ಬಾಂಗ್ಲಾ: ನಜ್ಮುಲ್‌ ಹೊಸೈನ್ ಶಾಂತೊ(ನಾಯಕ), ಸೌಮ್ಯಾ ಸರ್ಕಾರ್, ತಂಜೀದ್‌, ರಹೀಂ, ಮಹ್ಮೂದುಲ್ಲಾ, ಜಾಕರ್‌, ಮೆಹಿದಿ, ರಿಶಾದ್‌, ತಸ್ಕೀನ್‌ ಅಹಮದ್, ಮುಸ್ತಾಫಿಜುರ್‌ ರೆಹಮಾನ್, ನಹಿದ್‌.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IPL 2026: ಸೋಲಿನ ದವಡೆಯಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್; ಲಖನೌಗೆ ತವರಿನಲ್ಲೇ ಮರ್ಮಾಘಾತ!
ತನ್ನಂತೆ ಇರುವವನ ಕರೆಸಿ ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್