
ನವದೆಹಲಿ(ಮೇ.27): ನಿಯಮಗಳಲ್ಲಿ ಅನಗತ್ಯ ಬದಲಾವಣೆ, ಟಿ20ಗಾಗಿ ಉಳಿದ ಮಾದರಿಗಳ ಕಡೆ ನಿರ್ಲಕ್ಷ್ಯ ಸೇರಿದಂತೆ ಕಳೆದ 10 ವರ್ಷಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಕ್ರಿಕೆಟ್ ಕ್ರೀಡೆಯನ್ನು ಯಶಸ್ವಿಯಾಗಿ ಮುಗಿಸಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆರೋಪಿಸಿದ್ದಾರೆ.
‘ಐಸಿಸಿ ಏನು ಮಾಡಬೇಕು ಎಂದುಕೊಂಡಿತ್ತೋ ಅದನ್ನು ಯಶಸ್ವಿಯಾಗಿ ಮಾಡಿ ಮುಗಿಸಿದೆ. ಮೊದಲಿನಂತೆ ಈಗ ಸ್ಪರ್ಧಾತ್ಮಕ ಆಟ ನೋಡಲು ಸಾಧ್ಯವಿಲ್ಲ. ಸಚಿನ್ ವರ್ಸಸ್ ಅಖ್ತರ್ ಎನ್ನುವಂಥ ಸ್ಪರ್ಧೆ ಎಲ್ಲಿದೆ. ಬ್ಯಾಟ್ಸ್ಮನ್ಗಳಿಗೆ ಅನುಕೂಲವಾಗುವಂತೆ ಆಟವನ್ನು ಬದಲಿಸಲಾಗಿದೆ’ ಎಂದು ಅಖ್ತರ್ ಹೇಳಿದ್ದಾರೆ.
ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ; ವಧುವಿಲ್ಲದೆ ಮದವೆಯಂತೆ ಎಂದ ಅಕ್ತರ್!
ನಾನು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ, ಒಂದು ಓವರ್ಗೆ ಒಂದೇ ಬೌನ್ಸರ್ ನಿಯಮವನ್ನು ಬದಲಿಸಿ ಎಂದು. ಇನ್ನಾದರೂ ಬೌನ್ಸರ್ ಹೆಚ್ಚು ಹಾಕಲು ಅವಕಾಶ ನೀಡುವ ಬಗ್ಗೆ ಐಸಿಸಿ ಗಮನ ಹರಿಸಲಿ. ನಾನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನಲ್ಲಿದ್ದಿದ್ದರೆ ಏನಿಲ್ಲವೆಂದರೂ 12 ವೇಗದ ಬೌಲರ್ಗಳನ್ನು ಜಗತ್ತಿಗೆ ಪರಿಚಯಿಸುತ್ತಿದ್ದೆ ಎಂದು ಅಖ್ತರ್ ಹೇಳಿದ್ದಾರೆ.
ಶೋಯೆಬ್ ಅಖ್ತರ್ ಪಾಕಿಸ್ತಾನ ಪರ 163 ಏಕದಿನ ಪಂದ್ಯಗಳನ್ನಾಡಿ 247 ವಿಕೆಟ್ ಕಬಳಿಸಿದ್ದಾರೆ. ಇನ್ನು 46 ಟೆಸ್ಟ್ ಪಂದ್ಯಗಳನ್ನಾಡಿ 178 ವಿಕೆಟ್ ಪಡೆದಿದ್ದಾರೆ. 15 ಟಿ20 ಪಂದ್ಯಗಳಲ್ಲಿ 19 ಬ್ಯಾಟ್ಸ್ಮನ್ಗಳನ್ನು ಪೆವಿಲಿಯನ್ನಿಗೆ ಅಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.