ಗಡಿಯಲ್ಲಿ ಸೇವೆ ಮಾಡಲು ನಾನು ಸಿದ್ದ: ಚೀನಾ ವಿರುದ್ಧ ಗುಡುಗಿದ ರೈನಾ

Suvarna News   | Asianet News
Published : Jun 22, 2020, 04:08 PM IST
ಗಡಿಯಲ್ಲಿ ಸೇವೆ ಮಾಡಲು ನಾನು ಸಿದ್ದ: ಚೀನಾ ವಿರುದ್ಧ ಗುಡುಗಿದ ರೈನಾ

ಸಾರಾಂಶ

ಚೀನಾ ಕುತಂತ್ರದ ವಿರುದ್ಧ ಟೀಂ ಇಂಡಿಯಾ ಕ್ರಿಕೆಟಿಗರು ಧ್ವನಿ ಎತ್ತಲಾರಂಭಿಸಿದ್ದಾರೆ. ಒಂದು ವೇಳೆ ಪ್ರಧಾನಿ ಸೂಚಿಸಿದರೆ ಗಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದ ಎಂದು ಸುರೇಶ್ ರೈನಾ ಅಬ್ಬರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.22): ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಅನುಭವಿ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕುತಂತ್ರಿ ಚೀನಾ ವಿರುದ್ಧ ಕಿಡಿಕಾರಿದ್ದಾರೆ. ಭಾರತದ ನಂಬಿಕೆಗೆ ಚೀನಾ ಎಂದಿಗೂ ಅರ್ಹವಲ್ಲ ಎಂದು ರೈನಾ ಗುಡುಗಿದ್ದಾರೆ.

ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ್ದಕ್ಕಾಗಿ ಚೀನಾ ವಿರುದ್ಧ ಸಿಟ್ಟು ಬರುತ್ತಿದೆ. ಸರ್ಕಾರ ಇಲ್ಲಿಯವರೆಗೆ ಏನೆಲ್ಲಾ ಮಾಡಿದೆಯೋ ಒಳ್ಳೆಯ ಕೆಲಸವನ್ನೇ ಮಾಡಿದೆ. ಆದರೆ ನಮ್ಮ ಸೈನಿಕರು ಪ್ರಾಣ ಕಳೆದುಕೊಂಡಿದ್ದು ಬೇಸರದ ಸಂಗತಿ. ಇಲ್ಲಿ ಬೆಚ್ಚಗೆ ಕುಳಿತುಕೊಂಡು ಮಾತನಾಡುವುದು ಸುಲಭ. ಆದರೆ ಗಡಿಯಲ್ಲಿ ಕೆಲಸ ಮಾಡುವುದು ಅಷ್ಟು ಸುಲಭವಲ್ಲ. ಅವರ ಕೆಲಸವನ್ನು ಹೊಗಳಲು ಪದಗಳು ಸಾಲುತ್ತಿಲ್ಲ ಎಂದು ರೈನಾ ಹೇಳಿದ್ದಾರೆ.  ನಮ್ಮ ಸೈನ್ಯ ಬಲಿಷ್ಠವಾಗಿಯೇ ಇದೆ. ಪ್ರತಿಯೊಬ್ಬ ಸೈನಿಕನಿಗೂ ನನ್ನದೊಂದು ಸಲಾಮ್. ಮೊದಲು ಕೊರೋನಾ ಬಂತು, ಈಗ ಗಡಿಯಲ್ಲಿ ಘರ್ಷಣೆ. ಇದನ್ನೆಲ್ಲಾ ನೋಡಿದ್ರೆ ಇದೆಲ್ಲಾ ಮೊದಲೇ ತೀರ್ಮಾನವಾಗಿತ್ತೇನೋ ಎಂದು ಅನಿಸಲಾರಂಭಿಸಿದೆ. ನಮ್ಮ ಸೈನಿಕರು ಬಲಿಷ್ಠರಾಗಿದ್ದಾರೆ, ಅವರ ಧೈರ್ಯವನ್ನು ಮೆಚ್ಚಲೇ ಬೇಕು. ನಮ್ಮ ಸೈನಿಕರೆಲ್ಲಾ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರೈನಾ ಹೇಳಿದ್ದಾರೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಜೂನ್ 15ರಿಂದ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ಘಟನೆಯಲ್ಲಿ ಭಾರತದ 20 ವೀರ ಯೋಧರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಚೀನಿ ವಸ್ತುಗಳನ್ನು ಬಾಯ್ಕಾಟ್ ಮಾಡಬೇಕು ಎನ್ನುವ ಅಭಿಯಾನ ಜೋರಾಗಿ ಕೇಳಿ ಬರುತ್ತಿದೆ. ಚೀನಾ ಉತ್ಫನ್ನಗಳ ಪ್ರಾಯೋಜಕತ್ವದ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮುಂದಿನವಾರ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ. ಸದ್ಯ ಚೀನಾ ಮೊಬೈಲ್ ಉತ್ಪಾದನಾ ಕಂಪನಿ ವಿವೋ 5 ವರ್ಷದ ಅವಧಿಗೆ ಟೈಟಲ್ ಸ್ಪಾನ್ಸರ್‌ಶಿಪ್ ಹಕ್ಕು ಪಡೆದಿದೆ. ಇದಕ್ಕಾಗಿ ವಿವೋ ಕಂಪನಿಯು ಬಿಸಿಸಿಐಗೆ ವಾರ್ಷಿಕ 440 ಕೋಟಿ ರುಪಾಯಿಗಳನ್ನು ನೀಡುತ್ತಿದೆ.

ಚೀನಾ ವಸ್ತು ಪ್ರಚಾರ ಮಾಡಲ್ಲ, ಬಳಸಲ್ಲ; ಪ್ರತಿಜ್ಞೆ ಮಾಡಿದ ಹರ್ಭಜನ್!

ಸ್ಪಾನ್ಸರ್‌ಶಿಪ್‌ ಬಗ್ಗೆ ಬಿಸಿಸಿಐ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ನಮ್ಮ ಕೆಲಸವೇನಿದ್ದರು ಉತ್ತಮವಾಗಿ ಆಡುವುದು, ಈ ಮೂಲಕ ದೇಶದ ಗೌರವ ಹೆಚ್ಚುವಂತೆ ಮಾಡುವುದಾಗಿದೆ.  ಒಂದುವೇಳೆ ಪ್ರಧಾನಿ ಹೇಳಿದರೆ ನಾವು ಗಡಿಯಲ್ಲಿ ಸೇವೆ ಸಲ್ಲಿಸಲು ರೆಡಿಯಿದ್ದೇವೆ. ಪ್ರತಿಯೊಬ್ಬ ಸೈನಿಕರಿಗೂ ಗೊತ್ತಿದೆ, ಇಡೀ ದೇಶದ ಜನರು ಅವರ ಜೊತೆಗಿದ್ದಾರೆಂದು ಎಂದು ರೈನಾ ಹೇಳಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಚೀನಾ ವಸ್ತುಗಳನ್ನು ಪ್ರಚಾರ ಮಾಡಲ್ಲ ಹಾಗೆಯೇ ಬಳಸುವುದು ಇಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

ನನ್ನದು ಸೈನ್ಯದ ಹಿನ್ನಲೆಯಿರುವ ಕುಟುಂಬ. ಸೈನಿಕರ ಜೀವನ ಅಷ್ಟು ಸುಲಭವಲ್ಲ ಎನ್ನುವುದು ನೆನಪಿರಲಿ. ಚೀನಾ ಭಾರತದ ನಂಬಿಕೆಗೆ ಅರ್ಹವಲ್ಲ. ಚೀನಾ ಉತ್ಫನ್ನಗಳನ್ನು ಬಳಸದಿರುವುದರಿಂದ ಏನನ್ನು ಕಳೆದುಕೊಳ್ಳುವುದಿಲ್ಲ ಎಂದು ರೈನಾ ಅಬ್ಬರಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?