
ಬೆಂಗಳೂರು(ಮಾ.28): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.
ನಿರೀಕ್ಷೆಯಂತೆಯೇ ಉಭಯ ತಂಡಗಳಲ್ಲಿ ತಲಾ ಒಂದೊಂದು ಬದಲಾವಣೆ ಮಾಡಲಾಗಿದ್ದು, ಇಂಗ್ಲೆಂಡ್ ತಂಡದಲ್ಲಿ ಟಾಮ್ ಕರ್ರನ್ ಬದಲಿಗೆ ಮಾರ್ಕ್ವುಡ್ ತಂಡ ಕೂಡಿಕೊಂಡಿದ್ದರೆ, ಭಾರತ ಪರ ಕುಲ್ದೀಪ್ ಯಾದವ್ ಬದಲಿಗೆ ಟಿ. ನಟರಾಜನ್ ತಂಡ ಕೂಡಿಕೊಂಡಿದ್ದಾರೆ.
3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 66 ರನ್ಗಳಿಂದ ಜಯಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಜಾನಿ ಬೇರ್ಸ್ಟೋವ್ ಹಾಗೂ ಬೆನ್ ಸ್ಟೋಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ಗೆ 6 ವಿಕೆಟ್ಗಳ ಜಯ ತಂದುಕೊಟ್ಟಿದ್ದರು. ಸದ್ಯ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇದೀಗ ನಿರ್ಣಾಯಕ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
ತಂಡಗಳು ಹೀಗಿವೆ:
ಭಾರತ:
ಇಂಗ್ಲೆಂಡ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.