
ಲಂಡನ್(ಸೆ.13): ಭಾರತ ವಿರುದ್ಧ ನಡೆಯಬೇಕಿದ್ದ 5ನೇ ಟೆಸ್ಟ್ ಪಂದ್ಯ ಕೊರೋನಾ ಸೋಂಕಿನ ಭೀತಿಯಿಂದ ದಿಢೀರ್ ರದ್ದಾದ ಕಾರಣ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ(ಇಸಿಬಿ) 300 ಕೋಟಿ ರುಪಾಯಿ ನಷ್ಟದ ಸುಳಿಗೆ ಸಿಲುಕಿದೆ.
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಫಲಿತಾಂಶವನ್ನು ಏನೆಂದು ಘೋಷಿಸಬೇಕು ಎನ್ನುವ ಬಗ್ಗೆ ಇಸಿಬಿ ಹಾಗೂ ಬಿಸಿಸಿಐ ಇನ್ನೂ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ, ಮಧ್ಯಸ್ಥಿಕೆ ವಹಿಸುವಂತೆ ಇಸಿಬಿ, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ)ಗೆ ಅಧಿಕೃತವಾಗಿ ಮನವಿ ಸಲ್ಲಿಸಿದೆ. ಐಸಿಸಿ, ಪಂದ್ಯವನ್ನು ರದ್ದು ಎಂದು ಘೋಷಿಸಿದರೆ 5 ಪಂದ್ಯಗಳ ಸರಣಿ 2-1ರ ಅಂತರದಲ್ಲಿ ಭಾರತದ ಪಾಲಾಗಲಿದೆ. ಆಗ ಪಂದ್ಯದ ವಿಮೆ ಹಣ ಇಸಿಬಿಗೆ ಸಿಗುವುದಿಲ್ಲ.
ಕೊಹ್ಲಿ ಸೈನ್ಯಕ್ಕೆ ಕೊರೋನಾ ಆತಂಕ; ಭಾರತ-ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯ ರದ್ದು!
ಪಂದ್ಯವನ್ನು ಭಾರತ ಬಿಟ್ಟುಕೊಟ್ಟಿದೆ ಎಂದು ನಿರ್ಧಾರವಾದರೆ, ಆಗ ಸರಣಿ 2-2ರಲ್ಲಿ ಡ್ರಾಗೊಳ್ಳಲಿದ್ದು ಇಸಿಬಿಗೆ ವಿಮೆ ಹಣ ಸಿಗಲಿದೆ. ಪಂದ್ಯವನ್ನು ಬೇರೊಂದು ದಿನ ಆಯೋಜಿಸುವ ಬಗ್ಗೆ ಇಸಿಬಿ ಹಾಗೂ ಬಿಸಿಸಿಐ ಘೋಷಿಸಿದ್ದರೂ, ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ. ಜೊತೆಗೆ ಎರಡೂ ತಂಡಗಳಿಗೆ ಬಿಡುವಿಲ್ಲದ ವೇಳಾಪಟ್ಟಿ ಇರುವ ಕಾರಣ ಮುಂದಿನ ವರ್ಷ ಜೂನ್, ಜುಲೈ ವರೆಗೂ ಪಂದ್ಯ ಆಯೋಜನೆ ಕಷ್ಟ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.