ಟಾಸ್ ಸೋತವನೂ ಬಾಸ್; 4ನೇ T20 ಗೆಲುವಿನ ಜೊತೆಗೆ ಟೀಕೆಗೆ ಉತ್ತರ ನೀಡಿದ ಭಾರತ!

Published : Mar 18, 2021, 11:18 PM IST
ಟಾಸ್ ಸೋತವನೂ ಬಾಸ್; 4ನೇ T20 ಗೆಲುವಿನ ಜೊತೆಗೆ ಟೀಕೆಗೆ ಉತ್ತರ ನೀಡಿದ ಭಾರತ!

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿ ಮತ್ತಷ್ಟು ರೋಚಕವಾಗಿದೆ. 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿ, ಟೀಕೆಗೆ ಉತ್ತರ ನೀಡಿದೆ.ಟೀಂ ಇಂಡಿಯಾ ರೋಚಕ ಹೋರಾಟದ ಹೈಲೈಟ್ಸ್ ಇಲ್ಲಿದೆ.

ಅಹಮ್ಮದಾಬಾದ್(ಮಾ.18):  ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಟೀಂ ಇಂಡಿಯಾ ಇಂಗ್ಲೆಂಡ್‌ಗೆ ಶಾಕ್ ನೀಡಿದೆ. 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್ ಗೆಲುವು ದಾಖಲಿದೆ. ಈ ಮೂಲಕ ಟಿ20 ಸರಣಿ 2-2 ಅಂತರದಲ್ಲಿ ಸಮಬಲಗೊಂಡಿದ್ದು, ಇದೀಗ 5ನೇ ಹಾಗೂ ಅಂತಿಮ ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಈ ಪಂದ್ಯ ಗೆಲ್ಲೋ ಮೂಲಕ ಇಂಗ್ಲೆಂಡ್ ಮಾಜಿ ಕ್ರಿಕೆಟಿಗರ ಟೀಕೆಗೆ ಟೀಂ ಇಂಡಿಯಾ ಉತ್ತರ ನೀಡಿದೆ. ಟಾಸ್ ಗೆದ್ದವನೇ ಬಾಸ್ ಎಂಬ ಟೀಕೆಗೆ ಕೊಹ್ಲಿ ಸೈನ್ಯ ತಕ್ಕ ತಿರುಗೇಟು ನೀಡಿದೆ.

ಮೊದಲ ಎಸೆತದಲ್ಲೇ ಸಿಕ್ಸರ್; ಟಿ20 ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ದಾಖಲೆ!.

186 ರನ್ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡ ಆರಂಭದಲ್ಲೇ ಜೋಸ್ ಬಟ್ಲರ್ 9 ರನ್ ಸಿಡಿಸಿ ಔಟಾದರು. ಆದರೆ ಜೇಸನ್ ರಾಯ್ ಬ್ಯಾಟಿಂಗ್ ಇಂಗ್ಲೆಂಡ್ ತಂಡ ಚೇತರಿಸಿಕೊಂಡಿತು. ಡೇವಿಡ್ ಮಲನ್ 14 ರನ್ ಸಿಡಿಸಿ ಔಟಾದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ರಾಯ್ 40 ರನ್ ಸಿಡಿಸಿ ಔಟಾದರು.

ಜಾನಿ ಬೈರ್‌ಸ್ಟೋ ಹಾಗೂ ಬೆನ್ ಸ್ಟೋಕ್ಸ್ ಜೊತೆಯಾಟದಿಂದ ಇಂಗ್ಲೆಂಡ್ ಕೊಂಚ ಚೇತರಿಸಿಕೊಂಡಿತು. ಬೈರ್‌ಸ್ಟೋ 25 ರನ್ ಕಾಣಿಕೆನ ನೀಡಿದರೆ. ಆದರೆ ಬೆನ್ ಸ್ಟೋಕ್ಸ್ 46 ರನ್ ಸಿಡಿಸೋ ಮೂಲಕ ಇಂಗ್ಲೆಂಡ್ ತಂಡದ ಸರಣಿ ಗೆಲುವಿನ ಕನಸಿಗೆ ಮತ್ತಷ್ಟು ಪುಷ್ಠಿ ನೀಡಿದರು.

ಸ್ಟೋಕ್ಸ್ ಬೆನ್ನಲ್ಲೇ ಇಯಾನ್ ಮಾರ್ಗನ್ ವಿಕೆಟ್ ಪತನಗೊಂಡಿತು. ಇದು ಇಂಗ್ಲೆಂಡ್ ತಂಡಕ್ಕೆ ತೀವ್ರ ಹಿನ್ನಡೆ ತಂದಿತು. ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದ ಟೀಂ ಇಂಡಿಯಾ, ಆಂಗ್ಲರ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾಯಿತು. ಬಿರುಸಿನ ಆಟಕ್ಕೆ ಮುಂದಾದ ಇಂಗ್ಲೆಂಡ್ ವಿಕೆಟ್ ಕಳೆದುಕೊಂಡಿತು. 

ಅಂತಿಮ ಹಂತದಲ್ಲಿ ಕ್ರಿಸ್ ಜೋರ್ಡನ್ ಹಾಗೂ ಜೋಫ್ರಾ ಆರ್ಚರ್ ಬ್ಯಾಟಿಂಗ್ ಟೀಂ ಇಂಡಿಯಾದಲ್ಲಿ ಆತಂಕ ತಂದಿತು. ಅದರಲ್ಲೂ ಅಂತಿಮ ಓವರ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್ ಮೂಲಕ ಆರ್ಚರ್ ಪಂದ್ಯಕ್ಕೆ ತಿರುವು ನೀಡುವ ಪ್ರಯತ್ನ ಮಾಡಿದರು. ಆದರೆ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ಇಂಗ್ಲೆಂಡ್ 8 ವಿಕೆಟ್ ಕಳೆದುಕೊಂಡು 177 ರನ್ ಸಿಡಿಸಿತು. ಇದರೊಂದಿಗೆ ಟೀಂ ಇಂಡಿಯಾ 8 ರನ್ ಗೆಲುವು ಕಂಡಿತು. ಸರಣಿ ಇದೀಗ 2-2 ಅಂತರದಲ್ಲಿ ಸಮಬಲಗೊಂಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup: ಪಾಕಿಸ್ತಾನ ಎದುರು ಮುಗ್ಗರಿಸಿದ 14 ವರ್ಷದ ವೈಭವ್ ಸೂರ್ಯವಂಶಿ; ಸ್ಪರ್ಧಾತ್ಮಕ ಮೊತ್ತದತ್ತ ಯುವ ಪಡೆ ದಾಪುಗಾಲು
ಸಂಜು ಇನ್, ಗಿಲ್ ಔಟ್: ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಚಾನ್ಸ್?