ಟಿಮ್‌ ಸೌಥಿ ಜೀವದಾನ: ರಿಷಭ್ ಪಂತ್ ಬಚಾವ್‌..!

Suvarna News   | Asianet News
Published : Jun 23, 2021, 04:10 PM IST
ಟಿಮ್‌ ಸೌಥಿ ಜೀವದಾನ: ರಿಷಭ್ ಪಂತ್ ಬಚಾವ್‌..!

ಸಾರಾಂಶ

* ರಿಷಭ್ ಪಂತ್‌ಗೆ ಜೀವದಾನ ನೀಡಿದ ಟಿಮ್ ಸೌಥಿ * ಕೈಲ್ ಜೇಮಿಸನ್‌ ಬೌಲಿಂಗ್‌ನಲ್ಲಿ ಕ್ಯಾಚ್ ಕೈಚೆಲ್ಲಿದ ಸೌಥಿ * ಆರಂಭಿಕ ಆಘಾತಕ್ಕೊಳಗಾಗಿರುವ ಟೀಂ ಇಂಡಿಯಾ

ಸೌಥಾಂಪ್ಟನ್‌(ಜೂ.23): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನ ಕೊನೆಯ ದಿನದಾಟ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದ್ದು, ಭಾರತ ಆರಂಭದಲ್ಲೇ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡು ಆರಂಭಿಕ ಸಂಕಷ್ಟಕ್ಕೆ ಒಳಗಾಗಿದೆ.

ನ್ಯೂಜಿಲೆಂಡ್‌ನ ನೀಳಕಾಯದ ವೇಗಿ ಕೈಲ್ ಜೇಮಿಸನ್‌ ಆರಂಭದಲ್ಲೇ ಟೀಂ ಇಂಡಿಯಾದ ಎರಡು ವಿಕೆಟ್ ಕಬಳಿಸುವ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಶಾಕ್‌ ನೀಡಿದ್ದಾರೆ. ಕೊಹ್ಲಿ 13 ಹಾಗೂ ಪೂಜಾರ 15 ರನ್‌ ಬಾರಿಸಿ ಪೆವಿಲಿಯನ್‌ ಸೇರಿದ್ದಾರೆ. ಪೂಜಾರ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ರಿಷಭ್‌ ಪಂತ್‌ಗೆ ನ್ಯೂಜಿಲೆಂಡ್ ಬೌಲರ್‌ ಟಿಮ್‌ ಸೌಥಿ ಜೀವದಾನ ನೀಡಿದ್ದಾರೆ.

ಹೌದು, ಪಂತ್ 5 ರನ್‌ ಗಳಿಸಿದ್ದಾಗ ಜೇಮಿಸನ್‌ ಬೌಲಿಂಗ್‌ನಲ್ಲಿ ಬ್ಯಾಟ್ ಅಂಚು ಸವರಿದ ಚೆಂಡು ಎರಡನೇ ಸ್ಲಿಪ್‌ನಲ್ಲಿದ್ದ ಟಿಮ್ ಸೌಥಿ ಬಳಿ ಹೋಯಿತಾದರು, ಚೆಂಡಿನ ವೇಗವನ್ನು ಗ್ರಹಿಸಲಾರದೇ ಕ್ಯಾಚನ್ನು ಕೈಚೆಲ್ಲಿದರು. ಇದರಿಂದ ಪಂತ್‌ಗೆ ಜೀವದಾನ ಸಿಕ್ಕಂತಾಗಿದೆ. ಈ ಜೀವದಾನವನ್ನು ಪಂತ್ ಯಾವ ರೀತಿ ಬಳಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಸದ್ಯ ಟೀಂ ಇಂಡಿಯಾ 43 ಓವರ್‌ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 89 ರನ್‌ ಬಾರಿಸಿದ್ದು, ಒಟ್ಟಾರೆ 57 ರನ್‌ಗಳ ಮುನ್ನಡೆ ಸಾಧಿಸಿದೆ. ಪಂತ್ 11 ಹಾಗೂ ರಹಾನೆ 5 ರನ್‌ ಬಾರಿಸಿ ಕ್ರೀಸ್‌ನಲ್ಲಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?