
ರಾಯ್ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಭಾರತ ಮೊದಲ ಪಂದ್ಯವನ್ನು ಜಯಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಇಲ್ಲಿನ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಟಾಸ್ ಸೋಲು ಅನುಭವಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ನಿಂದ ಭಾರತ ಇದುವರೆಗೂ ಆಡಿದ ಎಲ್ಲಾ 20 ಏಕದಿನ ಪಂದ್ಯದಲ್ಲೂ ಟಾಸ್ ಗೆಲ್ಲಲು ವಿಫಲವಾಗಿದೆ. ಇದು ಅಚ್ಚರಿಯೆನಿಸಿದರೂ ಸತ್ಯ. ಇನ್ನು ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಯಾವುದೇ ಬದಲಾವಣೆಗಳಾಗಿಲ್ಲ.
ಮೊದಲ ಪಂದ್ಯದ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ದಕ್ಷಿಣ ಆಫ್ರಿಕಾ ತಂಡವು ಎರಡನೇ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ತೆಂಬಾ ಬವುಮಾ ತಂಡ ಕೂಡಿಕೊಂಡಿದ್ದು, ಇದರ ಜತೆಗೆ ಅನುಭವಿ ಸ್ಪಿನ್ನರ್ ಕೇಶವ್ ಮಹರಾಜ್ ಹಾಗೂ ವೇಗಿ ಲುಂಗಿ ಎಂಗಿಡಿ ಕೂಡಾ ಹರಿಣಗಳ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ.
ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್(ನಾಯಕ&ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಏಯ್ಡನ್ ಮಾರ್ಕ್ರಮ್, ತೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೆಟ್ಕೀ, ಟೋರ್ನಿ ಡಿ ಜಾರ್ಝಿ, ಡೆವಾಲ್ಡ್ ಬ್ರೆವೀಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬೋಷ್, ಕೇಶವ್ ಮಹರಾಜ್, ನಂದ್ರೆ ಬರ್ಗರ್, ಲುಂಗಿ ಎಂಗಿಡಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.