ರಾಜ್ಕೋಟ್(ಜೂ.17): ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಭಾರತ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರಾಗಿದೆ. ಸೌತ್ ಆಫ್ರಿಕಾ ವಿರುದ್ಧದ 4ನೇ ಹಾಗೂ ಮಹತ್ವದ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 169 ರನ್ ಸಿಡಿಸಿದೆ.
4ನೇ ಪಂದ್ಯದಲ್ಲೂ ಟಾಸ್ ಸೋತ ಟೀಂ ಇಂಡಿಯಾ ಒಲ್ಲದ ಮನಸ್ಸಿನಿಂದ ಬ್ಯಾಟಿಂಗ್ ಇಳಿಯಿತು. ಜೊತೆಗೆ ಉತ್ತಮ ಆರಂಭವೂ ಸಿಗಲಿಲ್ಲ. ರುತುರಾಜ್ ಗಾಯಕ್ವಾಡ್ 5 ರನ್ ಸಿಡಿಸಿ ಔಟಾದರು. ಇತ್ತ ಇಶಾನ್ ಕಿಶನ್ ಹೋರಾಟದ ಸೂಚನೆ ನೀಡಿದರು. ಆದರೆ ಶ್ರೇಯಸ್ ಅಯ್ಯರ್ 4 ರನ್ ಸಿಡಿಸಿ ಔಟಾದರು.
6 ತಿಂಗಳಲ್ಲಿ ಟೀಂ ಇಂಡಿಯಾಗೆ 5 ನಾಯಕರು!
ಇಶಾನ್ ಕಿಶನ್ 27 ರನ್ ಸಿಡಿಸಿ ಔಟಾದರು. ನಾಯಕ ರಿಷಬ್ ಪಂತ್ ಆಟ 17 ರನ್ಗೆ ಅಂತ್ಯವಾಯಿತು. 81 ರನ್ಗಳಿಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿತು. ಆದರೆ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು.
ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ನಿಂದ ಅಲ್ಪಮೊತ್ತಕ್ಕೆ ಕುಸಿಯು ಭೀತಿಯಿಂದ ಪಾರಾಯಿತು. ಹಾರ್ದಿಕ್ ಪಾಂಡ್ಯ 31 ಎಸೆತದಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 46 ರನ್ ಸಿಡಿಸಿ ಔಟಾದರು. ಅಕ್ಸರ್ ಪಟೇಲ್ ಜೊತೆ ಹೋರಾಟ ಮುಂದುವರಿಸಿದ ದಿನೇಶ್ ಕಾರ್ತಿಕ್ ಭಾರತದ ಸ್ಪರ್ಧಾತ್ಮಕ ಮೊತ್ತ ಸಿಡಿಸುವಲ್ಲಿ ನೆರವಾದರು.
ದಿನೇಶ್ ಕಾರ್ತಿಕ್ 27 ಎಸೆತದಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 55 ರನ್ ಸಿಡಿಸಿ ಔಟಾದರು . ಈ ಮೂಲಕ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 169 ರನ್ ಸಿಡಿಸಿತು.
Ind vs SA: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ..!
4ನೇ ಟಿ20 ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಕಾರಣ ಆರಂಭಿಕ 2 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ 3ನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಿತ್ತು. ಈ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ನಾಲ್ಕನೇ ಪಂದ್ಯವೂ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಮುಂದಿನ ಪಂದ್ಯದಲ್ಲಿ ಸರಣಿ ಯಾರಿಗೆ ಅನ್ನೋದು ನಿರ್ಧಾರವಾಗಲಿದೆ. ಈಗಾಗಲೇ 2 ಪಂದ್ಯ ಗೆದ್ದಿರುವ ಸೌತ್ ಆಫ್ರಿಕಾ ಸರಣಿ ಕೈವಶ ಮಾಡಲು ಸಜ್ಜಾಗಿದೆ.
ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮುಗ್ಗರಿಸಿತು. ಭಾರತದ ಬೃಹತ್ ಮೊತ್ತ ಬೆನ್ನಟ್ಟಿದ ಸೌತ್ ಆಫ್ರಿಕಾ 7 ವಿಕೆಟ್ ಗೆಲುವು ಕಂಡಿತ್ತು. ಇತ್ತ ಎರಡನೇ ಪಂದ್ಯದಲ್ಲೂ ಭಾರತ ಮುಗ್ಗರಿಸಿತು. ಬ್ಯಾಟಿಂಗ್ನಲ್ಲಿ ಎಡವಿದ ಭಾರತ ಸಾಧಾರಣ ಮೊತ್ತ ಪೇರಿಸಿತ್ತು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 4 ವಿಕೆಟ್ ಗೆಲುವು ಕಂಡಿತು. ಆದರೆ ಮೂರನೇ ಪಂದ್ಯದಲ್ಲಿ ಭಾರತ ಕಮ್ಬ್ಯಾಕ್ ಮಾಡಿತು. ಈ ಮೂಲಕ 48 ರನ್ ಗೆಲುವು ದಾಖಲಿಸಿತು. ಸರಣಿಯಲ್ಲಿ ಮೊದಲ ಗೆಲುವು ದಾಖಲಿಸಿತು.