
ರಾಜ್ಕೋಟ್(ಜ.07): ಸೂರ್ಯಕುಮಾರ್ ಯಾದವ್ ಸ್ಫೋಟಕ ಸೆಂಚುರಿ, ಬೌಲರ್ಗಳ ದಿಟ್ಟ ಹೋರಾಟ ಶ್ರೀಲಂಕಾ ತಂಡವನ್ನೇ ಬೆಚ್ಚಿ ಬೀಳಿಸಿದೆ. ಪರಿಣಾಮ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾ 16.4 ಓವರ್ಗಳಲ್ಲಿ 137 ರನ್ಗಳಿಗೆ ಆಲೌಟ್ ಆಯಿತು.
ಟೀಂ ಇಂಡಿಯಾ 91 ರನ್ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ 2-1 ಅಂತರದಲ್ಲಿ ಭಾರತ ಟಿ20 ಸರಣಿ ವಶಪಡಿಸಿಕೊಂಡಿದೆ.
ಸೂರ್ಯಕುಮಾರ್ ಯಾದವ್ ಅಜೇಯ 112 ರನ್ನಿಂದ ಭಾರತ 228 ರನ್ ಸಿಡಿಸಿತ್ತು. ಈ ಬೃಹತ್ ಟಾರ್ಗೆಟ್ ಚೇಸ್ ಮಾಡಲು ಶ್ರೀಲಂಕಾಗೆ ಸಾಧ್ಯವಾಗಲಿಲ್ಲ. ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ಲಂಕಾ ತತ್ತರಿಸಿತು. ಪಥುಮ್ ನಿಸಂಕ 15 ರನ್ ಸಿಡಿಸಿ ಔಟಾದರು. ಇತ್ತ ಕುಸಾಲ್ ಮೆಂಡೀಸ್ 23 ರನ್ ಸಿಡಿಸಿ ಔಟಾದರು. ಆವಿಷ್ಕಾ ಫರ್ನಾಂಡೋ 1 ರನ್ ಸಿಡಿಸಿ ಔಟಾದರು.
ಧನಂಜಯ್ ಡಿಸಿಲ್ವ 22 ರನ್ ಕಾಣಿಕೆ ನೀಡಿದರು. ಚಾರಿತ್ ಅಸಲಂಕ 19 ರನ್ ಸಿಡಿಸಿ ನಿರ್ಗಮಿಸಿದರು. ಕಳೆದೆರಡು ಪಂದ್ಯದಲ್ಲಿ ಅಬ್ಬರಿಸಿದ ನಾಯ ದಸೂನ್ ಶನಕ ಈ ಪಂದ್ಯದಲ್ಲಿ ಅಬ್ಬರಿಸಿಲ್ಲ. ಇದು ಶ್ರೀಲಂಕಾ ತಂಡಕ್ಕೆ ತೀವ್ರ ಹಿನ್ನಡೆ ತಂದಿದೆ.
ಅಂತಿಮವಾಗಿ ಶ್ರೀಲಂಕಾ 16.4 ಓವರ್ಗಳಲ್ಲಿ 137 ರನ್ ಸಿಡಿಸಿ ಆಲೌಟ್ ಆಯಿತು. ಈ ಮೂಲಕ ಭಾರತ 91 ರನ್ಗಳ ಭರ್ಜರಿ ಗೆಲುವು ದಾಖಲಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.