
ಕೊಲೊಂಬೊ(ಜು.18): ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಆರಂಭದಲ್ಲೇ ತೀವ್ರ ರೋಚಕತೆ ಪಡೆಯುತ್ತಿದೆ. ಭಾರತ ವಿರುದ್ಧ ಟಾಸ್ ಗೆದ್ದ ಬ್ಯಾಟಿಂಗ್ ಇಳಿದ ಶ್ರೀಲಂಕಾ, ಉತ್ತಮ ಆರಂಭ ಪಡೆದಿತ್ತು. ಆವಿಶ್ಕಾ ಫರ್ನಾಂಡೋ ಹಾಗೂ ಮಿನೋದ್ ಬಾನುಕಾ 49 ರನ್ಗಳ ಜೊತೆಯಾಟ ನೀಡಿದ್ದರು. ಇವರಿಬ್ಬರ ಜೊತೆಯಾಟಕ್ಕೆ ಯಜುವೇಂದ್ರ ಚಹಾಲ್ ಬ್ರೇಕ್ ಹಾಕಿದ್ದಾರೆ.
32 ರನ್ ಸಿಡಿಸಿ ಅಪಾಯದ ಮುನ್ಸೂಚನೆ ನೀಡಿದ್ದ ಆವಿಶ್ಕಾ ಫರ್ನಾಂಡೋ ಆಟಕ್ಕೆ ಚಹಾಲ್ ಪೂರ್ಣವಿರಾಮ ಹಾಕಿದರು. ಚಹಾಲ್ ಎಲೆತದಲ್ಲಿ ಮನೀಶ್ ಪಾಂಡೆಗೆ ಕ್ಯಾಚ್ ನೀಡಿದ ಆವಿಶ್ಕಾ ನಿರಾಸೆಯೊಂದಿಗೆ ಪೆವಿಲಿಯನ್ ಸೇರಿಕೊಂಡರು. ಚಹಾಲ್ ತಮ್ಮ ಮೊದಲ ಓವರ್ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ಮಿಂಚಿದರು.
ಈ ಪಂದ್ಯದಲ್ಲಿ ಯಚುವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಜೊತೆಯಾಗಿ ಕಣಕ್ಕಿಳಿದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಈ ಜೋಡಿ ಜೊತೆಯಾಗಿ ಕಣಕ್ಕಿಳಿದಿತ್ತು. ಬಳಿಕ ಕುಲ್ದೀಪ್ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಇದೀಗ 2 ವರ್ಷಗಳ ಬಳಿಕ ಮತ್ತೆ ಕುಲ್ಚಾ ಜೋಡಿ ಕಾಣಿಸಿಕೊಂಡಿದೆ. ಇಷ್ಟೇ ಅಲ್ಲ ಮ್ಯಾಜಿಕ್ ಆರಂಭಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.