
ಕೊಲೊಂಬೊ(ಜು.29): ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳೋ ಮೂಲಕ ಆರಂಭಿಕ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ ಇದೀಗ ಪ್ರಮುಖ 6 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಅಲ್ಪ ಮೊತ್ತಕ್ಕೆ ಆಲೌಟ್ ಭೀತಿ ಎದುರಿಸುತ್ತಿದೆ.
INDvsSL: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ; 1 ಬದಲಾವಣೆ!
ಆರಂಭದಲ್ಲೇ ನಾಯಕ ಶಿಖರ್ ಧವನ್ ವಿಕೆಟ್ ಪತನಗೊಂಡಿತು. ಧವನ್ ಡಕೌಟ್ ಆದರು. ದೇವದತ್ ಪಡಿಕ್ಕಲ್ ಕೇವಲ 9 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಸಂಜು ಸಾಮ್ಯನ್ಸ್ ಶೂನ್ಯ ಸುತ್ತಿದರು. ರುತುರಾಜ್ ಗಾಯಕ್ವಾಡ್ 14 ರನ್ ಕಾಣಿಕೆ ನೀಡಿದರು. ನತೀಶ್ ರಾಣಾ ಕೇವಲ 6 ರನ್ ಗಳಿಸಿ ಔಟಾದರು.ಭುವನೇಶ್ವರ್ ಕುಮಾರ್ ವಿಕೆಟ್ ಕೂಡ ಪತನಗೊಂಡಿದೆ.
ಬೌಲರ್ ಹೋರಾಟದ ಮೇಲೆ ಟೀಂ ಇಂಡಿಯಾ ಸ್ಕೋರ್ ನಿಂತಿದೆ. ಸದ್ಯ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿರುವ ಟೀಂ ಇಂಡಿಯಾ ಮೇಲೆ ಲಂಕಾ ಹೆಚ್ಚಿನ ಒತ್ತಡ ಹೇರುತ್ತಿದೆ. ಇದು ನಿರ್ಣಾಯಕ ಪಂದ್ಯವಾಗಿತ್ತು. ಗೆದ್ದ ತಂಡ ಸರಣಿ ಗೆಲ್ಲಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.